ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು.

ಬೆಂಗಳೂರು: ರಾಜ್ಯದ ಎಲ್ಲಾ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಗುರುವಾರ ಹೇಳಿದ್ದಾರೆ.

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ನಿಯಮವನ್ನು ಜಾರಿಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಕರ್ನಾಟಕಕ್ಕೆ ಪ್ರವೇಶಿಸುವ ಅಂತರರಾಜ್ಯ ಬಸ್‌ಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ತುರ್ತು ನಿರ್ಗಮನ ದ್ವಾರಗಳಿಲ್ಲದೆ ಕಂಡುಬಂದರೆ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಲಗೇಜ್ ಸಾಗಿಸುವ ಬಸ್‌ಗಳು ಮತ್ತು ಅನುಮತಿಸಲಾದ ಮಿತಿಗಳನ್ನು ಮೀರಿ ಲೋಡ್ ಸಾಗಿಸುವ ಭಾರೀ ವಾಹನಗಳ ಮೇಲೆ ತಪಾಸಣೆ ತೀವ್ರಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಶಾಲಾ ಮತ್ತು ಕಾಲೇಜು ಬಸ್‌ಗಳ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ಸಂಪೂರ್ಣ ತಪಾಸಣೆಗೊಳಪಡಿಸಬೇಕು. ಅವಧಿ ಮೀರಿದ ಪ್ರಮಾಣಪತ್ರಗಳನ್ನು ಹೊಂದಿರುವ ವಾಹನಗಳಿಗೆ ತಕ್ಷಣವೇ ನೋಟಿಸ್ ನೀಡಬೇಕು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ ತಿಂಗಳು ವಿಶೇಷ ತಪಾಸಣಾ ತಂಡಗಳನ್ನು ರಚಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ಮತ್ತೆ ಜೈಲುಪಾಲು: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್