ಹುಲಿ (ಸಂಗ್ರಹ ಚಿತ್ರ) 
ರಾಜ್ಯ

ಹುಲಿ ಮರಿ ಸೆರೆ: ತಾಯಿ ಹುಲಿ ಮತ್ತೆರಡು ಮರಿಗಳಿಗಾಗಿ ಮುಂದುವರೆದ ಕಾರ್ಯಾಚರಣೆ

ತಾಯಿ ಹುಲಿ ಮೂರು ಮರಿಗಳೊಂದಿಗೆ ಆಗಾಗ್ಗೆ ಗ್ರಾಮಸ್ಥರ ಕಣ್ಣಿಗೆ ಬೀಳುತ್ತಿತ್ತು. ಇದು ವ್ಯಾಪಕ ಭಯ ಮತ್ತು ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು,

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಡಿಗನಹಳ್ಳಿ ಗ್ರಾಮದಲ್ಲಿ ಹುಲಿ ಮರಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದ್ದು, ಇದೀಗ ತಾಯಿ ಹುಲಿ ಹಾಗೂ ಮತ್ತೆರಡು ಮರಿಗಳಿಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ.

ತಾಯಿ ಹುಲಿ ಮೂರು ಮರಿಗಳೊಂದಿಗೆ ಆಗಾಗ್ಗೆ ಗ್ರಾಮಸ್ಥರ ಕಣ್ಣಿಗೆ ಬೀಳುತ್ತಿತ್ತು. ಇದು ವ್ಯಾಪಕ ಭಯ ಮತ್ತು ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು,

ಬಳಿಕ ಅರಣ್ಯ ಇಲಾಖೆಯು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದರಂತೆ ಒಂದು ಗಂಡು ಮರಿಯನ್ನು ಸೆರೆಹಿಡಿಯಲಾಗಿದ್ದು, ತಾಯಿ ಹುಲಿ ಮತ್ತು ಅದರ ಉಳಿದ ಎರಡು ಮರಿಗಳನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರೆದಿದೆ.

ತಾಯಿ ಹುಲಿ ಹಾಗೂ ಮರಿ ಹುಲಿಗಳಿಗಾಗಿ ಬಿಲ್ಕೆರೆ, ಚಿಕ್ಕಡಿಗನಹಳ್ಳಿ ಮತ್ತು ಇಲವಾಲ ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

ಈ ನಡುವೆ ದೊಡ್ಡಕಾಡನಹಳ್ಳಿ, ರತ್ನಳ್ಳಿ, ಹೊಸಕಮನಕೊಪ್ಪಲು, ಹಳೆಕಮನಕೊಪ್ಪಲು ಮತ್ತು ಎರಪ್ಪನಕೊಪ್ಪಲು ಸೇರಿದಂತೆ ಹತ್ತಿರದ ಹಳ್ಳಿಗಳಲ್ಲಿ ಹುಲಿ ಮತ್ತು ಅದರ ಮರಿಗಳು ಓಡಾಡುತ್ತಿರುವುದಾಗಿ ಹೇಳಲಾಗುತ್ತಿದ್ದು, ಕಾರ್ಯಾಚರಣೆ ಮುಗಿಯುವವರೆಗೆ ಅರಣ್ಯ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಲು ಮತ್ತು ಜಾಗರೂಕರಾಗಿರಲು ಅರಣ್ಯ ಇಲಾಖೆ ಸ್ಥಳೀಯ ನಿವಾಸಿಗಳಿಗೆ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar Election Results 2025 Live: ಮ್ಯಾಜಿಕ್ ಸಂಖ್ಯೆ 122 ಮೀರಿ 166 ಸ್ಥಾನಗಳಲ್ಲಿ NDA ಮುನ್ನಡೆ; ಇಂಡಿಯಾ ಬಣ 59 ಸ್ಥಾನಗಳಲ್ಲಿ ಮುಂದೆ

Bihar trends- ಬಿಹಾರ ಮತ ಎಣಿಕೆ ಪ್ರಗತಿಯಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ NDA ಮುನ್ನಡೆ, ಮಹಾಘಟಬಂಧನ್ ಹಿನ್ನಡೆ

ವೃಕ್ಷಮಾತೆ- ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ

Bihar Election Results 2025: ಮತ ಎಣಿಕೆ ಆರಂಭ, ಸತತ 5ನೇ ಬಾರಿ ಗೆಲುವಿನ ಉತ್ಸಾಹದಲ್ಲಿ ನಿತೀಶ್ ಕುಮಾರ್, ಬದಲಾವಣೆ ನಿರೀಕ್ಷೆಯಲ್ಲಿ ತೇಜಸ್ವಿ ಯಾದವ್

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ಅಭಿನಂದನೆಗಳು: ಆರ್. ಅಶೋಕ್ ಲೇವಡಿ

SCROLL FOR NEXT