ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಶನಿವಾರ ತನಿಖಾ ಸ್ಥಿತಿಗತಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ನಡೆಸಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರು ಹಾಗೂ ಜಾರಿ ನಿರ್ದೇಶನಾಲಯ ಹಾಗೂ ಲೋಕಾಯುಕ್ತ ಪರವಾಗಿ ವಿಶೇಷ ಪಬ್ಲಿಕ್ ಪ್ಲಾಸಿಕ್ಯೂಟರ್ (SPP) ಉಪಸ್ಥಿತಿದ್ದರು. ಸಂಕ್ಷಿಪ್ತ ವಿಚಾರಣೆಯ ಸಮಯದಲ್ಲಿ, ಲೋಕಾಯುಕ್ತದ SPP ಮುಡಾ ಸಂಬಂಧಿತ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಿದರು. ವರದಿಯ ಪ್ರತಿಯನ್ನು ದೂರುದಾರರಿಗೆ ಹಸ್ತಾಂತರಿಸಲಾಯಿತು.

ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಪ್ರಾಸಿಕ್ಯೂಟರ್, ಹೆಚ್ಚಿನ ವಿವರವಾದ ವರದಿ ಸಲ್ಲಿಸಲು ಹೆಚ್ಚಿನ ಸಮಾಯವಕಾಶವನ್ನು ಕೋರಿದರು. ಸಲ್ಲಿಕೆಯನ್ನು ಸ್ವೀಕರಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ