ಬಂಡೀಪುರ ಮತ್ತು ನಾಗರಹೊಳೆ ಹುಲಿ ಮೀಸಲು ಪ್ರದೇಶಗಳ ಗ್ರಾಮಸ್ಥರಿಗೆ ಅರಣ್ಯ ಅಧಿಕಾರಿಗಳು ಮಾಸ್ಕ್ ವಿತರಿಸಿದರು. 
ರಾಜ್ಯ

ಹೆಚ್ಚುತ್ತಿರುವ ಮಾನವ-ಹುಲಿ ಸಂಘರ್ಷ: ಸುಂದರ್‌ಬನ್ ಕಾಡಿನ ಸಮುದಾಯ ಪ್ರೇರಣೆಯಿಂದ ಗ್ರಾಮಸ್ಥರಿಗೆ ಮಾಸ್ಕ್ ವಿತರಣೆ, ಇದು ಹೇಗೆ ಕೆಲಸ ಮಾಡುತ್ತದೆ?

ಮಾಸ್ಕ್ ವಿತರಣೆ ಈಗಾಗಲೇ ಪ್ರಾರಂಭವಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ ಪರಮೇಶ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ(The New Indian Express) ತಿಳಿಸಿದರು.

ಮೈಸೂರು: ಬಂಡೀಪುರ ಮತ್ತು ನಾಗರಹೊಳೆ ಹುಲಿ ಮೀಸಲು ಪ್ರದೇಶಗಳ ಗಡಿಯಲ್ಲಿರುವ ಹಳ್ಳಿಗಳಲ್ಲಿ ಹೆಚ್ಚುತ್ತಿರುವ ಮನುಷ್ಯ-ಹುಲಿ ಸಂಘರ್ಷವನ್ನು ಪರಿಹರಿಸಲು, ಅರಣ್ಯ ಅಧಿಕಾರಿಗಳು ಪಶ್ಚಿಮ ಬಂಗಾಳದ ಸುಂದರ್‌ಬನ್ಸ್‌ನಲ್ಲಿರುವ ಸಮುದಾಯಗಳಿಂದ ಪ್ರೇರಿತವಾದ ವಿಶಿಷ್ಟ ತಂತ್ರವನ್ನು ಅಳವಡಿಸಿಕೊಂಡಿದ್ದಾರೆ.

ಏನದು ಪರಿಹಾರ?

ಸುಂದರ್ ಬನ್ ಕಾಡಿನಲ್ಲಿ ಹುಲಿ ದಾಳಿಯನ್ನು ತಡೆಯಲು ಜನರು ತಲೆಯ ಹಿಂಭಾಗದಲ್ಲಿ ಮುಖವಾಡಗಳನ್ನು ಧರಿಸುತ್ತಾರೆ. ಅರಣ್ಯ ಇಲಾಖೆ ಈಗ ಅರಣ್ಯದ ಅಂಚಿನಲ್ಲಿರುವ ಹಳ್ಳಿಗಳಿಗೆ ಅಂತಹ ಮುಖವಾಡಗಳನ್ನು ವಿತರಿಸಲು ಪ್ರಾರಂಭಿಸಿದೆ.

ಇತ್ತೀಚೆಗೆ ಮೂವರು ರೈತರು ಮೃತಪಟ್ಟಿದ್ದರು. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡರು. ನಿರಂತರ ತಪಾಸಣೆ ಕಾರ್ಯಾಚರಣೆಗಳು ಮತ್ತು ಮರಿಗಳು ಸೇರಿದಂತೆ ಸುಮಾರು 10 ಹುಲಿಗಳನ್ನು ಸೆರೆಹಿಡಿಯಲಾಗಿದ್ದರೂ, ಗ್ರಾಮಸ್ಥರಿಗೆ ಹುಲಿ ಕಾಣಿಸಿಕೊಳ್ಳುತ್ತಲೇ ಇದೆ. ಕೃಷಿ ಅಥವಾ ಜಾನುವಾರು ಮೇಯಿಸಲು ತಮ್ಮ ಹೊಲಗಳಿಗೆ ಹೋಗಲು ಭಯಪಡುತ್ತಿದ್ದಾರೆ.

ಹುಲಿಗಳು ಸಾಮಾನ್ಯವಾಗಿ ಹಿಂದಿನಿಂದ ದಾಳಿ ಮಾಡುತ್ತವೆ ಎಂಬ ತತ್ವವನ್ನು ಆಧರಿಸಿದ ಸುಂದರ್‌ಬನ್ಸ್ ವಿಧಾನವು ಕಣ್ಣಿನ ಸಂಪರ್ಕದ ಭ್ರಮೆಯನ್ನು ಸೃಷ್ಟಿಸಲು ಮುಖವಾಡಗಳನ್ನು ಬಳಸುತ್ತದೆ. ಇದು ದಾಳಿಗಳನ್ನು ಸಾಕಷ್ಟು ಕಡಿಮೆ ಮಾಡುತ್ತದೆ. ಕರ್ನಾಟಕ ಅರಣ್ಯ ಅಧಿಕಾರಿಗಳು ದುರ್ಬಲ ಸಮುದಾಯಗಳಿಗೆ 10,000 ಮುಖವಾಡಗಳನ್ನು ಉಚಿತವಾಗಿ ವಿತರಿಸಲು ಯೋಜಿಸಿದ್ದಾರೆ.

ಮಾಸ್ಕ್ ವಿತರಣೆ ಈಗಾಗಲೇ ಪ್ರಾರಂಭವಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ ಪರಮೇಶ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ(The New Indian Express) ತಿಳಿಸಿದರು.

ಅರಣ್ಯ ಸಿಬ್ಬಂದಿ ಕಾಡಿನ ಬದಿಯ ಹಳ್ಳಿಗಳಿಗೆ ಭೇಟಿ ನೀಡಿ, ಕೃಷಿ ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿರುವವರಿಗೆ ಮಾಸ್ಕ್‌ಗಳನ್ನು ವಿತರಿಸುತ್ತಿದ್ದಾರೆ. ಅವುಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜನರು ಜಾಗರೂಕರಾಗಿರುವುದನ್ನು ಮತ್ತು ಹೊರಗೆ ಕಾಲಿಟ್ಟಾಗಲೆಲ್ಲಾ ಮಾಸ್ಕ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಲು ಆಟೋರಿಕ್ಷಾಗಳ ಮೂಲಕವೂ ಪ್ರಕಟಣೆಗಳನ್ನು ಹೊರಡಿಸಲಾಗುತ್ತಿದೆ ಎಂದರು.

ಮಾಸ್ಕ್‌ಗಳ ಜೊತೆಗೆ, ಕಾಡು ಪ್ರಾಣಿಗಳ ಮುಖಾಮುಖಿಯ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ಪಟ್ಟಿ ಮಾಡುವ ಕರಪತ್ರಗಳನ್ನು ಅರಣ್ಯ ಸಿಬ್ಬಂದಿ ಹಂಚುತ್ತಿದ್ದಾರೆ. ಹಲವಾರು ಹಳ್ಳಿಗಳಲ್ಲಿ ಸ್ವಯಂ ರಕ್ಷಣಾ ತಂತ್ರಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಸಹ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar: 'ಅಂದು ಇದೇ ಕೊಳಕು ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ'..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ

Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್‌ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!

ಡಿ ಕೆ ಶಿವಕುಮಾರ್ ಸಮಾಧಾನಪಡಿಸಲು ಸಿದ್ದರಾಮಯ್ಯ ಪಾಳಯದಿಂದ '2028 ಸೂತ್ರ'? ಕಾಂಗ್ರೆಸ್ ನಲ್ಲಿ ಹೊಸ ಆಂತರಿಕ ಗೊಂದಲ

1st Test: 124 ರನ್​ಗಳ ಗುರಿಯನ್ನೂ ಮುಟ್ಟಲಾಗದೇ ಹೀನಾಯ ಸೋಲುಕಂಡ ಭಾರತ!

Bihar polls: 'ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಆರೋಪ; ಸೋದರಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್: ಮೂಲಗಳು

SCROLL FOR NEXT