ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!

ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.

ಕೊಡಗು: ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು. ಇದರಿಂದ ಬೇಸರಗೊಂಡ ಪತಿ ಕೊನೆಗೆ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ನಿವಾಸಿ ಕೀರ್ತನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ನವೆಂಬರ್ 15ರ ಸಂಜೆ ಈ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಶನಿವಾರ ಸಂಜೆ ಕೀರ್ತನ್ ತನ್ನ ಪತ್ನಿಯನ್ನು ಕರೆತರಲು ಅತ್ತೆ ಮನೆಗೆ ತೆರಳಿದ್ದನು. ಆದರೆ ಎಷ್ಟೇ ಅಂಗಲಾಚಿದರು ಪತ್ನಿ ತನ್ನೊಂದಿಗೆ ಬರಲು ಒಪ್ಪಲಿಲ್ಲ. ಬೇಸರದಿಂದ ಮನೆಗೆ ಬಂದ ಕೀರ್ತನ್ ಕೊನೆಯ ಪ್ರಯತ್ನವೆಂಬಂತೆ ಪತ್ನಿಗೆ ವಿಡಿಯೋ ಕರೆ ಮಾಡಿ ಮನೆಗೆ ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾನೆ. ಇದಕ್ಕೂ ಪತ್ನಿ ಬಗ್ಗದಿದ್ದಾಗ ಕೀರ್ತನ್ ವಿಡಿಯೋ ಕರೆ​ ಲೈವ್​ನಲ್ಲೇ ಪತ್ನಿ ಮುಂದೆ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಆಘಾತಗೊಂಡ ಕೀರ್ತನ್ ಪತ್ನಿ ತಕ್ಷಣವೇ ಸ್ಥಳೀಯರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕಾಲ ಮಿಂಚಿ ಹೋಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್