ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್'ನಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲು

ಇದಲ್ಲದೆ, ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ, ವಿಶೇಷವಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಾಗಲಿದೆ ಎಂದೂ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ನವೆಂಬರ್ 14 ರಂದು ಬೀದರ್‌ನಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದ ಬಯಲು ಪ್ರದೇಶಗಳಲ್ಲಿ ಇದುವರೆಗೆ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದಲ್ಲದೆ, ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ, ವಿಶೇಷವಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಾಗಲಿದೆ ಎಂದೂ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕ್ರಮವಾಗಿ 1 ಡಿಗ್ರಿ ಸೆಲ್ಸಿಯಸ್ ಮತ್ತು 0.7 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿ 16.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕನಿಷ್ಠ 11.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 4.8 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ವಿಜಯಪುರ ಮತ್ತು ಧಾರವಾಡದಲ್ಲಿ ಕ್ರಮವಾಗಿ 12.4 ಮತ್ತು 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 17.8 ಮತ್ತು 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಇನ್ನು ರಾಜ್ಯ ವಿವಿಧೆಡೆ ತಾಪಮಾನ ಇಳಿಕೆಯಾದರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಶುಕ್ರವಾರ ಮತ್ತು ಶನಿವಾರ ತಾಪಮಾನದಲ್ಲಿ ಕೊಂಚ ಏರಿಕೆ ಕಂಡು ಬಂದಿತ್ತು.

ನರಗರದಲ್ಲಿ ಶನಿವಾರ ಗರಿಷ್ಠ ತಾಪಮಾನ 27.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 0.1 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ರಾಜ್ಯದ ಹೆಚ್ಚಿನ ಭಾಗಗಳಿಗೆ, ವಿಶೇಷವಾಗಿ ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

delhi red fort blast case: ಸ್ಫೋಟದ ಸ್ಥಳದಲ್ಲಿ 9 ಎಂಎಂ ಕಾರ್ಟ್ರಿಡ್ಜ್‌ ಗಳು ಪತ್ತೆ, ಭಯೋತ್ಪಾದಕರ ನಂಟು ದೃಢ..!

ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ: ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ಮಂತ್ರಿಗಿರಿಗಾಗಿ ಲಾಬಿ ಶುರು..!

'ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ರಾಹುಲ್ ಗಾಂಧಿಯವರಿಗೆ ಧೈರ್ಯ ತುಂಬಿದ್ದೇನೆ': ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿಕೆ ಶಿವಕುಮಾರ್

ಬಿಹಾರದಲ್ಲಿ NDA ಗೆಲುವು ಬೆನ್ನಲ್ಲೇ BJP ರಾಜ್ಯಾಧ್ಯಕ್ಷ ಕುರಿತು ಚರ್ಚೆ ಶುರು: ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆಂದು ವಿಜಯೇಂದ್ರ ವಿಶ್ವಾಸ

SCROLL FOR NEXT