ಸುರೇಶ್ ಕುಮಾರ್ 
ರಾಜ್ಯ

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ

ಟ್ರಾಫಿಕ್ ಪೊಲೀಸ್ ಆಗಿ ಕಾರ್ಯನಿರ್ವಹಿಸಿರುವುದು ಒಂದು "ಉತ್ತಮ" ಅನುಭವ ಎಂದ ಸುರೇಶ್ ಕುಮಾರ್ ಅವರು, ಪ್ರತಿ ಸೋಮವಾರ ಒಂದು ಗಂಟೆ ಸಂಚಾರಿ ಪೊಲೀಸರ ಕಾರ್ಯ ನಿರ್ವಹಣೆಗೆ ಸಹಾಯ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಬೆಂಗಳೂರು: ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು ಮಂಗಳವಾರ ನಗರದ ಭಾಷ್ಯಂ ವೃತ್ತದಲ್ಲಿ ಸಂಚಾರಿ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸಿದರು.

ಬೆಂಗಳೂರು ಸಂಚಾರ ಪೊಲೀಸರ ಆಹ್ವಾನದ ಮೇರೆಗೆ ಸುರೇಶ್ ಕುಮಾರ್ ಅವರು ಇಂದು ರಾಜಾಜಿನಗರದ ಭಾಷ್ಯಂ ವೃತ್ತದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಿದರು.

ಟ್ರಾಫಿಕ್ ಪೊಲೀಸ್ ಆಗಿ ಕಾರ್ಯನಿರ್ವಹಿಸಿರುವುದು ಒಂದು "ಉತ್ತಮ" ಅನುಭವ ಎಂದ ಸುರೇಶ್ ಕುಮಾರ್ ಅವರು, ಪ್ರತಿ ಸೋಮವಾರ ಒಂದು ಗಂಟೆ ಸಂಚಾರಿ ಪೊಲೀಸರ ಕಾರ್ಯ ನಿರ್ವಹಣೆಗೆ ಸಹಾಯ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ನಿಜಕ್ಕೂ ಸಂಚಾರಿ ಪೊಲೀಸರು ಸಂಚಾರ ನಿಯಂತ್ರಣದಲ್ಲಿ ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ಏನೆಲ್ಲಾ ಸಮಸ್ಯೆಗಳಿವೆ ಎಂಬುವುದು ಇಂದು ನನ್ನ ಅನುಭವಕ್ಕೆ ಬಂದಿದೆ ಎಂದರು.

"ಒಂದು ದಿನ ಸಂಚಾರಿ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುವ ಮೂಲಕ ನಾನು ಅಪಾರ ಅನುಭವವನ್ನು ಪಡೆದುಕೊಂಡೆ ಮತ್ತು ಈ ಕೆಲಸವನ್ನು ನಾನು ಆನಂದಿಸಿದೆ. ಬೆಂಗಳೂರು ಸಂಚಾರಿ ಪೊಲೀಸರ ಈ ಉಪಕ್ರಮವು ನಿಜವಾಗಿಯೂ ಸ್ವಾಗತಾರ್ಹ" ಎಂದು ಸುರೇಶ್ ಕುಮಾರ್ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅವರು ಟ್ರಾಫಿಕ್ ಪೊಲೀಸ್ ಜಾಕೆಟ್ ಧರಿಸಿ ಇತರ ಪೊಲೀಸ್ ಸಿಬ್ಬಂದಿಗಳೊಂದಿಗೆ ಕೆಲಸ ಮಾಡುತ್ತಿರುವುದು, ಸಂಚಾರವನ್ನು ನಿರ್ವಹಿಸುವುದು, ಅವರೊಂದಿಗೆ ಸಂವಹನ ನಡೆಸುವುದು, ಸಿಗ್ನಲ್ ಅನ್ನು ನಿರ್ವಹಿಸುವುದು ಮತ್ತು ಜಂಕ್ಷನ್‌ನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಸಾರ್ವಜನಿಕರನ್ನು ಪ್ರಶ್ನಿಸುವುದನ್ನು ಅವರು ಹಂಚಿಕೊಂಡ ವಿಡಿಯೋದಲ್ಲಿ ನೋಡಬಹುದು.

"ಇಂದು ಒಂದು ರೀತಿಯಲ್ಲಿ ನನಗೆ ಹಬ್ಬದ ವಾತಾವರಣ. ನಾವು ವಿವಿಧ ಹಬ್ಬಗಳು ಮತ್ತು ಕಾರ್ಯಕ್ರಮಗಳನ್ನು ಆಚರಿಸುತ್ತೇವೆ ಮತ್ತು ಭಾಗವಹಿಸುತ್ತೇವೆ. ಆದರೆ ಸಂಚಾರ ಪೊಲೀಸ್ ಸಿಬ್ಬಂದಿಯಾಗಿ ನಾನು ಪಡೆದ ಅನುಭವ ವಿಶಿಷ್ಟವಾಗಿದೆ. ಏಕೆಂದರೆ ಪ್ರಯಾಣಿಕರು ಸಂಚಾರ ನಿಯಮಗಳನ್ನು ಹೇಗೆ ಅನುಸರಿಸುತ್ತಾರೆ ಅಥವಾ ಪ್ರತಿಕ್ರಿಯಿಸುತ್ತಾರೆ ಮತ್ತು ನಿಯಮಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದಾಗ ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನಾನು ವೈಯಕ್ತಿಕವಾಗಿ ತಿಳಿದುಕೊಂಡಿದ್ದೇನೆ" ಎಂದು ಸುರೇಶ್ ಕುಮಾರ್ ಅವರು ವಿಡಿಯೋ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವರು "ಒಂದು ದಿನದ ಸಂಚಾರಿ ಪೊಲೀಸ್"ನ ಭಾಗವಾಗಿ ಸಂಚಾರಿ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸಿದರು. ಇದು BTP ASTraM ಅಪ್ಲಿಕೇಶನ್ ಮೂಲಕ ನೋಂದಾಯಿಸಿಕೊಳ್ಳುವ ಮೂಲಕ ನಾಗರಿಕರು ಸಂಚಾರಿ ಠಾಣೆಯ ಅಧಿಕಾರಿಗಳು ಅಥವಾ ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ಅವಕಾಶವನ್ನು ಒದಗಿಸುವ ಬೆಂಗಳೂರು ಸಂಚಾರಿ ಪೊಲೀಸರು ಪ್ರಾರಂಭಿಸಿದ ನವೀನ ಪ್ರಯೋಗವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ!

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ

SCROLL FOR NEXT