ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಚ್ ಸಿ ಮಹದೇವಪ್ಪ ಮತ್ತಿತರರು ದೆಹಲಿಯ ಕರ್ನಾಟಕ ಭವನದಲ್ಲಿ ಭೋಜನ ಸವಿದರು. 
ರಾಜ್ಯ

ರಿಲ್ಯಾಕ್ಸ್ ಮೂಡ್ ನಲ್ಲಿ CM-DCM: ದೆಹಲಿಯಲ್ಲಿ ಜತೆಯಾಗಿಯೇ ಭೋಜನ ಸವಿದ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್

ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದಿಢೀರ್‌ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸಂಪುಟ ಪುನಾರಚನೆಯೋ ಅಥವಾ ನಾಯಕತ್ವ ಬದಲಾವಣೆಯೋ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಸಿಎಂ- ಡಿಸಿಎಂ ಮಾತ್ರ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದರು. ಅಷ್ಟೇ ಅಲ್ಲ, ಇಬ್ಬರೂ ಒಟ್ಟಿಗ ಭೋಜನ ಸವಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದಿಢೀರ್‌ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿ, ಸ್ಥಳದಲ್ಲಿದ್ದ ಮಾಧ್ಯಮಗಳಿಗೆ ಪೋಸು ಕೊಟ್ಟರು. ನಂತರ ಇಬ್ಬರೂ ಮಧ್ಯಾಹ್ನದ ಊಟವನ್ನೂ ಸವಿದರು.

ನ. 14ಕ್ಕೇ ದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌, ಅಲ್ಲಿಯೇ ಬೀಡುಬಿಟ್ಟಿದ್ದರು. ಈ ಅವಧಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ಹಲವು ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಅದರಲ್ಲಿ ನಾಯಕತ್ವ ಬದಲಾವಣೆ ಕೂಡ ಒಂದಾಗಿತ್ತು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ