ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ವಾಹನ ಚಲಾಯಿಸಲು ಬಾಲಕ ಯತ್ನ; ಲಾರಿಗೆ ಡಿಕ್ಕಿ ಹೊಡೆದು ದಾರುಣ ಸಾವು

ರವೀಂದ್ರ ಮಹ್ತೊ ಮತ್ತು ರೀನಾ ಧಾಬಿ ದಂಪತಿಯ ಪುತ್ರ ಸಜನ್ ಕುಮಾರ್ (9) ಮೃತ ಬಾಲಕ. ಬಿಹಾರ ಮೂಲದ ಕುಟುಂಬ 2 ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿತ್ತು.

ಬೆಂಗಳೂರು: ಇಟ್ಟಿಗೆ ಕಾರ್ಖಾನೆಯೊಳಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಚಲಾಯಿಸಲು ಯತ್ನಿಸುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಲಾರಿಗೆ ಡಿಕ್ಕಿ ಹೊಡೆಸಿ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆಯೊಂದು ಅತ್ತಿಬೆಲೆ ಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿರುವ ಎಸ್‌ಆರ್‌ಟಿ ಬ್ರಿಕ್ಸ್ ಕಾರ್ಖಾನೆಯಲ್ಲಿ ನಡೆದಿದೆ.

ರವೀಂದ್ರ ಮಹ್ತೊ ಮತ್ತು ರೀನಾ ಧಾಬಿ ದಂಪತಿಯ ಪುತ್ರ ಸಜನ್ ಕುಮಾರ್ (9) ಮೃತ ಬಾಲಕ. ಬಿಹಾರ ಮೂಲದ ಕುಟುಂಬ 2 ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿತ್ತು. ರವೀಂದ್ರ ಇಟ್ಟಿಗೆ ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ದಂಪತಿಗಳು ಸಜನ್ ಸೇರಿದಂತೆ ತಮ್ಮ ಮೂವರು ಮಕ್ಕಳೊಂದಿಗೆ ಕಾರ್ಖಾನೆ ಮಾಲೀಕರು ಒದಗಿಸಿದ ಶೆಡ್‌ನಲ್ಲಿ ವಾಸಿಸುತ್ತಿದ್ದರು.

ನವಂಬರ್ 8 ರಂದು ಮಧ್ಯಾಹ್ನ 12.40 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಕಾರ್ಖಾನೆಯ ಮಾಲೀಕ ಇಟ್ಟಿಗೆಗಳನ್ನು ಸಾಗಿಸಲು ಕಾರ್ಮಿಕರಿಗೆ ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದ್ದರು. ಶೆಡ್ ನಲ್ಲಿದ್ದ ಬಾಲಕ ಆಟವಾಡುತ್ತ ವಾಹನ ಚಲಾಯಿಸಿದ್ದಾನೆ. ಎಂಜಿನ್ ಆನ್ ಮಾಡಿ ಆಕ್ಸಿಲರೇಟರ್ ಆನ್ ಮಾಡಿದ್ದಾನೆ. ಬಳಿಕ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ರವೀಂದ್ರ ಅವರು ಪುತ್ರನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೋಲೀಸರು ಕಾರ್ಖಾನೆ ಮಾಲೀಕ ಸುರೇಶ್ ನನ್ನು ಬಂಧನಕ್ಕೊಳಪಡಿಸಿದ್ದಾರೆ. ಈತನ ವಿರುದ್ಧ ಸೂರ್ಯನಗರ ಪೊಲೀಸರು ನಿರ್ಲಕ್ಷ್ಯದಿಂದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಹನವನ್ನು ದೂರ ಪಾರ್ಕ್ ಮಾಡದ ಕಾರಣ ಹಾಗೂ ಘಟನೆ ಸಮಯದಲ್ಲಿ ವಾಹನವನ್ನು ಲಾಕ್ ಮಾಡದ ಕಾರಣ ಬಾಲಕ ಸಾವನ್ನಪ್ಪಿದ್ದಾರೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ಉಗ್ರ ಹೇಳಿದ್ದೇನು?

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ BSF

SCROLL FOR NEXT