ಸಿಟಿ ರವಿ ಸುದ್ದಿಗೋಷ್ಠಿ 
ರಾಜ್ಯ

ಮೆಡಿಕಲ್ ಕಾಲೇಜುಗಳಲ್ಲಿ ಹಗಲು ದರೋಡೆ, ಟೆಂಡರ್ ನಲ್ಲಿ ಭಾರೀ ಗೋಲ್ ಮಾಲ್: ಸಿ.ಟಿ ರವಿ ಆರೋಪ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್‍ಮಾಲ್ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ಬೆಂಗಳೂರು: ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಮನಸ್ಸಿಗೆ ಬಂದ ಬೆಲೆಗೆ ಮೆಡಿಸನ್ ಮಾರಾಟ ಮಾಡಲಾಗುತ್ತಿದ್ದು, ಹಗಲು ದರೋಡೆ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಬುಧವಾರ ಆರೋಪಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಬೆಲೆಗಿಂತ 10 ಪಟ್ಟು ಹೆಚ್ಚಿನ ಬೆಲೆಯಲ್ಲಿ ಮೆಡಿಸಿನ್ ಮಾರಾಟ ಮಾಡಲಾಗುತ್ತಿದ್ದು, ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್‍ಮಾಲ್ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ಕೊಟ್ಟಿದ್ದೆ. ಬಳಿಕ ಕೆಲವು ಭಯಾನಕ ಸತ್ಯಗಳನ್ನು ನನ್ನ ಗಮನಕ್ಕೆ ತಂದರು. ವೈದ್ಯಕೀಯ ಕಾಲೇಜಿನಲ್ಲಿ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್‍ಮಾಲ್ ನಡೆಸಿದ್ದಾರೆ. ಬಿಡ್ ನಿಗದಿಪಡಿಸಬೇಕಾದರೆ, ಒಂದು ಔಷಧಿಗೆ ಕಡಿಮೆ ದರ ಇದ್ದವರ ಬದಲಾಗಿ ಎಲ್ಲ ಔಷಧಿಗಳ ಬಿಡ್ ಕಡಿಮೆ ದರ ನಮೂದಿಸಿರಬೇಕು ಎಂದು ಸೂಚಿಸಿದ್ದಾರೆ. ಆಗ ಆವಿಷ್ಕಾರ್ ಸರ್ಜಿಕಲ್, ಕೆಇಎಂಪಿಎಸ್, ನೂತನ್ ಫಾರ್ಮ, ರಾಜಲಕ್ಷ್ಮಿ ಏಜೆನ್ಸಿ, ಸಿವಾ ಫಾರ್ಮ, ಎಸ್ಸೆಲ್ ಆರ್ ಏಜೆನ್ಸಿಸ್ ಸೇರಿ ಆರು ಕಂಪೆನಿಗಳು ಮಾತ್ರ ಅರ್ಹತೆ ಪಡೆದವು. ಅರ್ಹತಾ ಮಾನದಂಡದಿಂದ ಉಳಿದೆಲ್ಲ ಕಂಪೆನಿಗಳನ್ನು ಹೊರಗಿಟ್ಟರು. ಕೇವಲ ಆರನ್ನು ಅರ್ಹವಾಗಿ ಮಾಡಿದ್ದಾರೆ ಎಂದು ದೂರಿದರು.

ಆವಿಷ್ಕಾರ್ ಗೆ 126, ಕೆಇಎಂಪಿಎಸ್ ಗೆ 130, ನೂತನ್- 26, ರಾಜಲಕ್ಷ್ಮಿ ಏಜೆನ್ಸಿಗೆ 53, ಸಿವಾ- 26, ಎಸ್ಸೆಲ್ಲಾರ್‍ಗೆ 54- ಹೀಗೆ ಮಂಜೂರಾಗಿದೆ. ಈ ಆಸ್ಪತ್ರೆ ಆರೋಗ್ಯ ಇಲಾಖೆ ಅಡಿಯಲ್ಲಿತ್ತು. ಈಗ ವೈದ್ಯಕೀಯ ಶಿಕ್ಷಣದಡಿ ಬರುತ್ತದೆ. ಈಗ ಸರಬರಾಜು ಆಗುತ್ತಿರುವ ದರ ಮತ್ತು ಹೊಸ ದರದಲ್ಲಿ ಅಗಾಧವಾದ ವ್ಯತ್ಯಾಸವಿದೆ ಎಂದು ಟೀಕಿಸಿದರು. ಹಣ ಲೂಟಿ ಹೊಡೆಯಲಾಗಿದೆ. ಹಣ ಲೂಟಿಗೆ ಆಳುವವರ ಸಹಕಾರ ಇರುವುದು ಸ್ಪಷ್ಟ ಎಂದು ಆರೋಪಿಸಿದರು.

ಜಿಲ್ಲಾಸ್ಪತ್ರೆಗೆ ಈಗ 10.75 ರೂ.ಗೆ ಸರಬರಾಜಾಗುವ ಕಣ್ಣಿನ ದ್ರಾವಣವನ್ನು (ಮೋಕ್ಷಿ ಪ್ಲಾಕ್ಸಾಕ್ಸಿನ್) 116 ರೂ.ಗೆ ಸರಬರಾಜಿಗೆ ಟೆಂಡರ್ ಮಾಡಿದ್ದಾರೆ. ದರದಲ್ಲಿ 981 ಪ್ರತಿಶತ ಹೆಚ್ಚಳ ಕಂಡುಬಂದಿದೆ. ಕ್ಯಾಲ್ಸಿಯಂ ಕಾರ್ಬೊನೇಟ್ ಹಾಗೂ ವಿಟಮಿನ್ ಡಿ 3, ಐಒ ಟ್ಯಾಬ್ಲೆಟ್ ರೂ. 4.03ಕ್ಕೆ ಹಾಲಿ ಸರಬರಾಜಾಗುತ್ತಿದೆ. 35.64 ರೂ.ಗೆ ಈಗ ಟೆಂಡರ್ ಒಪ್ಪಂದವಾಗಿದೆ ಎಂದು ಗಮನಕ್ಕೆ ತಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

'ನರಕಾಸುರ' ಮೋದಿಯನ್ನು ಕೊಲ್ಲಬೇಕು': ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ, ಚಪ್ಪಾಳೆ ತಟ್ಟಿದ ಮಹಿಳೆಯರು, Video

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ...: ಸಾರ್ವಜನಿಕ ಸ್ಥಳದಲ್ಲಾಗಿದ್ದ ಕರಾಳ ಘಟನೆ ತೆರದಿಟ್ಟ ನಟಿ Girija Oak

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

SCROLL FOR NEXT