ಪುರುಷೋತ್ತಮ ಬಿಳಿಮಲೆ  
ರಾಜ್ಯ

Yakshagana-ಯಕ್ಷಗಾನದಲ್ಲಿ ಸಲಿಂಗ ಕಾಮಗಳು ಬೆಳೀತಿದ್ದವು, ಸ್ತ್ರೀ ಪಾತ್ರಧಾರಿಗಳ ಮೇಲೆ ಕ್ರಷ್ ಆಗುತ್ತಿತ್ತು: ಪುರುಷೋತ್ತಮ ಬಿಳಿಮಲೆ

ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ.

ಮೈಸೂರು : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇದ್ದಿತು, ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿದ್ದವು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಮಾಡಿದ ನಂತರ ಮಾಡಿದ ಭಾಷಣದಲ್ಲಿ ಪುರುಷೋತ್ತಮ ಬಿಳಿಮಲೆಯವರು ನೀಡಿದ ಈ ಹೇಳಿಕೆ ಬಾರೀ ವಿವಾದ ಹುಟ್ಟಿಸಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ

ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು.

ಕಲೆ, ದೈಹಿಕ ಕಾಮನೆಗಳು, ಭಾವನೆಗಳು ಇವೆಲ್ಲವನ್ನು ರಂಗಭೂಮಿಯ ಎದುರು ಕಾಣುವ ಲೋಕಕ್ಕಿಂತ ಭಿನ್ನವಾಗಿ ಪ್ರಕಟಗೊಳ್ಳುವ ಬಗೆ ಇದೆಯಲ್ಲ ಇವೆಲ್ಲ ವಿದ್ವಾಂಸರು, ಜಾನಪದ ವಿದ್ವಾಂಸರು ತಿಳಿದುಕೊಂಡು, ಅರ್ಥಮಾಡಿಕೊಂಡು ಯಾರಿಗೂ ತೊಂದರೆ ಆಗದ ಹಾಗೆ ಯಾರ ಭಾವನಗೂ ನೋವಾಗದ ಹಾಗೆ ಅಕ್ಷರದಲ್ಲಿ ಸುಂದರವಾಗಿ ಬರೆಯುವ ಕಲೆಯನ್ನು ಕಲಿತುಕೊಂಡರೆ ಯಕ್ಷಗಾನ ಜಾನಪದಕ್ಕೆ ಇನ್ನೊಂದು ಹೊಸ ಆಯಾಮ ಬರುತ್ತದೆ. ಈ ಅರ್ಥದಲ್ಲಿ ನನಗೆ ನಾವು ಕೂಗುವ ಕೂಗು ತುಂಬಾ ಸಂತೋಷ ಕೊಟ್ಟ ಕೃತಿ, ಇದರಲ್ಲಿ ಏಳು ಮಂಟೆಸ್ವಾಮಿ ಪರಂಪರೆಯ ನೀಲಗಾರರ ಆತ್ಮಕಥನಗಳಿವೆ ಎಂದರು.

ಸತ್ಯವನ್ನು ಹೇಳಲು ಹಿಂಜರಿಯಬಾರದು

ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದರು.

ನಮಗೆ ಸ್ತ್ರೀ ವೇಷ ಪಾತ್ರಧಾರಿಗಳ ಮೇಲೆ ಕ್ರಷ್

ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು.

ಯಕ್ಷಗಾನ ಕಲಾವಿದರ ಸಂಕಷ್ಟ

ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಬಾರದು. ಅವರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

Belagavi BlackBuck Death Case: 31 ಕೃಷ್ಣಮೃಗಗಳ ಸಾವಿಗೆ 'Hemorrhagic Septicemia' ಸೋಂಕು ಕಾರಣ..!

ದೆಹಲಿ ಸ್ಫೋಟಕ್ಕೆ 1ವಾರ ಮೊದಲು ಪುಲ್ವಾಮಾ ಮನೆಗೆ ಭೇಟಿ: ಸಹೋದರನಿಗೆ ಮೊಬೈಲ್ ನೀಡಿದ್ದ ಡಾ. ಉಮರ್

ಜನಾಂಗೀಯ ಹಿಂಸಾಚಾರ: ಮೊದಲ ಬಾರಿ ಮಣಿಪುರಕ್ಕೆ ಮೋಹನ್ ಭಾಗವತ್ ಭೇಟಿ

SCROLL FOR NEXT