ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಾರ್ಕಳ: ಜನಿವಾರ -ಮಣಿಕಟ್ಟಿನ ದಾರದ ವಿಚಾರಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ; ದೈಹಿಕ ಶಿಕ್ಷಕ ವಜಾ

ವಿದ್ಯಾರ್ಥಿಗಳಿಗೆ ಅನಿಯಮಿತವಾಗಿ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.

ಉಡುಪಿ: ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ.

ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಸೋಮವಾರ ಅತಿಥಿ ಶಿಕ್ಷಕ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅನಿಯಮಿತವಾಗಿ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯಲ್ಲಿ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮಕಂದಾರ್ ಕ್ಷಮೆಯಾಚಿಸಿದ್ದರೂ, ಶಾಲಾ ಆಡಳಿತವು ಅವರನ್ನು ವಜಾಗೊಳಿಸಿದೆ.

ಈ ಘಟನೆಯು ಸಮುದಾಯದ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಚಿಂತಕಿ ರಮಿತಾ ಸೂರ್ಯವಂಶಿ ಮಾತನಾಡಿ, ಅವರು ಶಿಕ್ಷಕ "ಹಿಂದೂ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ" ಎಂದು ಹೇಳಿದ್ದಾರೆ. ಚಿಕ್ಕ ಮಕ್ಕಳ ಮೇಲಿನ ಕಿರುಕುಳ ಸ್ವೀಕಾರಾರ್ಹವಲ್ಲ, ಪವಿತ್ರ ದಾರದ ಧಾರ್ಮಿಕ ಮಹತ್ವ ಮತ್ತು ಮಾನಸಿಕ ಮತ್ತು ದೈಹಿಕ ಯೋಗಕ್ಷೇಮದಲ್ಲಿ ಅದರ ಪಾತ್ರದ ಬಗ್ಗೆ ಒತ್ತಿ ಹೇಳಿದರು. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂರ್ಯವಂಶಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ; ನಾಳೆ ಬಿಹಾರ ನೂತನ ಸಿಎಂ ಆಗಿ ಪ್ರಮಾಣ

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?

ಮಹಾಯುತಿಯಲ್ಲಿ ಭಿನ್ನಮತ ಸ್ಫೋಟ: ಬಿಜೆಪಿಗೆ ಇನ್ಮುಂದೆ ಏಕನಾಥ್ ಶಿಂಧೆ ಅಗತ್ಯವಿಲ್ಲ; ಮೈತ್ರಿಕೂಟ ತೊರೆಯುವಂತೆ ಮನವಿ

ಉಗ್ರ ಸಂಘಟನೆ ಸೇರಲು ಹೆತ್ತ ಅಮ್ಮ, ಮಲತಂದೆ ಒತ್ತಾಯ: ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ ಮಗ!

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

SCROLL FOR NEXT