ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜ್ಯ

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು.

ಬೆಂಗಳೂರು: ಮೇಕೆದಾಟು ಜಲಾಶಯ ಯೋಜನೆಯ ಕುರಿತು ರಾಜ್ಯ ಸರ್ಕಾರ ಹೊಸ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯೋಜನೆಯನ್ನು ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಹೊಸ ಡಿಪಿಆರ್ ಸಿದ್ದಪಡಿಸಿದ ನಂತರ ಕೇಂದ್ರಕ್ಕೆ ನಿಯೋಗವೊಂದನ್ನು ಕೊಂಡೊಯ್ದು ಅಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಯೋಜನೆಗೆ ಸಹಕಾರ ಕೋರತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಸದ್ಯಕ್ಕೆ ಅದರ ಅವಶ್ಯಕತೆಯಿಲ್ಲ. ಮುಂದೆ ಅವಶ್ಯಕತೆ ಬಂದಾಗ ಹೋಗುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ