ಮೃತ 
ರಾಜ್ಯ

BMTC ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು: ಮಡಿವಾಳ ಮಾರ್ಕೆಟ್ ಬಳಿ ದುರಂತ

ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ. ಬೆಳಗ್ಗೆ 6:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋದಾಗ ಅಪಘಾತ ನಡೆದಿದೆ. ಸದ್ಯ ವೆಂಕಟರಾಮಪ್ಪ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದೆ.

ಮಡಿವಾಳ ಬಸ್ ನಿಲ್ದಾಣದಲ್ಲಿ ತರಕಾರಿ ತೆಗೆದುಕೊಂಡು ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ನಿಂತಿದ್ದರು. ಈ ವೇಳೆ ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ. ಮೊದಲು ಟಾಟಾ ಎಸಿ ಗಾಡಿಗೆ ಡಿಕ್ಕಿಯಾಗಿ ಬಳಿಕ ವೆಂಕಟರಾಮಪ್ಪಗೆ ಬಸ್ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?

ಪಾಕ್ ಆಟಗಾರರೊಂದಿಗೆ 'ಹ್ಯಾಂಡ್ ಶೇಕ್ ಇಲ್ಲ' ನೀತಿಗೆ ತೀಲಾಂಜಲಿ: ಫ್ಯಾನ್ಸ್ ಗೆ ಅಚ್ಚರಿ ಮೂಡಿಸಿದ ಹರ್ಭಜನ್ ಸಿಂಗ್! Video

5th Generation Fighter: "ಭಾರತಕ್ಕೆ ಬೇಕಾದ್ದು ಕೊಡ್ತೇವೆ": ವಿಶ್ವದ ಯಾವುದೇ ರಾಷ್ಟ್ರ ಮಾಡದ 'ಸಾಹಸ' ಮಾಡಿದ ರಷ್ಯಾ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯ 'ಫೇಸ್ ಬುಕ್ 'ನಲ್ಲಿ ಲೈವ್ ಬಂದರೆ ಹೇಗಿರುತ್ತದೆ? ಈ Video ನೋಡಿ..

SCROLL FOR NEXT