ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಮಾರ್ಗವಾಗಿ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಕಲ್ಪಿಸುವ ಹೊಸ ಬಸ್ ಸಂಚಾರಕ್ಕೆ ಸಹ ಶಾಸಕರು ಚಾಲನೆ ನೀಡಿದರು.
ಪುತ್ತೂರಿನಿಂದ ಬೆಂಗಳೂರಿಗೆ ಬೆಳಗ್ಗೆ ವೇಳೆ ಬಸ್ ಸಂಚಾರ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.