ಬಿಜೆಪಿ ನಾಯಕ ಮಣಿಕಂಠ ರಾಥೋಡ್ ಅವರನ್ನು ನೆಲೋಗಿ ಪೊಲೀಸರು ಬಂಧಿಸಿದ್ದಾರೆ. 
ರಾಜ್ಯ

ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್​ ಬಂಧನ..!

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ.

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.

ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಸರ್ಕಾರಿ ಉದ್ಯೋಗ ಭರ್ತಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ: ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿಕೆ ಶಿವಕುಮಾರ್

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಶಾಲೆಗಳ ಬಳಿ ಮಾಂಸದ ಅಂಗಡಿಗಳು ಹಿಂಸಾಚಾರವನ್ನು ಉತ್ತೇಜಿಸುತ್ತವೆ: ಬಿಹಾರ ಉಪ ಮುಖ್ಯಮಂತ್ರಿ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

SCROLL FOR NEXT