ಗ್ರೇಟರ್ ಬೆಂಗಳೂರು ಪ್ರಾಧಿಕಾರ  
ರಾಜ್ಯ

ಕಸ ಗುಡಿಸಲು 613 ಕೋಟಿ ರೂ ವೆಚ್ಚದಲ್ಲಿ ಬಾಡಿಗೆ ಯಂತ್ರ: ಸರ್ಕಾರದ ನಡೆ ಸಮರ್ಥಿಸಿಕೊಂಡ GBA

ಹಲವಾರು ಸಭೆಗಳನ್ನು ನಡೆಸಿದ ನಂತರ ಕಸ ಗುಡಿಸುವ ಯಂತ್ರ ಖರೀದಿಸುವ ಬದಲು ಬಾಡಿಗೆಗೆ ಪಡೆಯುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ 613 ಕೋಟಿ ರೂ.ವೆಚ್ಚದಲ್ಲಿ ಬಾಡಿಗೆ ಯಂತ್ರ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮರ್ಥಿಸಿಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು, ಹಲವಾರು ಸಭೆಗಳನ್ನು ನಡೆಸಿದ ನಂತರ ಕಸ ಗುಡಿಸುವ ಯಂತ್ರ ಖರೀದಿಸುವ ಬದಲು ಬಾಡಿಗೆಗೆ ಪಡೆಯುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಕಸ ಗುಡಿಸುವ ಯಂತ್ರ ಖರೀದಿ ಮಾಡಬೇಕೇ ಅಥವಾ ಬಾಡಿಗೆ ಪಡೆಯಬೇಕೇ ಎಂಬ ಬಗ್ಗೆ ಒಂದು ವರ್ಷ ಅಧ್ಯಯನ ನಡೆಸಿ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾಪವನೆಗೆ ಸಂಪುಟ ಅನುಮೋದನೆ ನೀಡಿದೆ. ಇದೀಗ ಟೆಂಡರ್ ಆಹ್ವಾನಿಸಲಾಗುವುದು. ಪ್ರಸ್ತಾವನೆಯಲ್ಲಿ ಅಂದಾಜು ವೆಚ್ಚದ ಲೆಕ್ಕಾಚಾರ ಸಲ್ಲಿಸಲಾಗಿದೆ.

ಬಾಡಿಗೆ ಪಡೆಯುವ ಕುರಿತು ಸರ್ಕಾರಕ್ಕೂ ಸ್ಪಷ್ಟೀಕರಣ ನೀಡಲಾಗಿದೆ. ಸಿಬ್ಬಂದಿ, ಯಂತ್ರ ನಿರ್ವಹಣೆ ವೆಚ್ಚ ಗಮನಿಸಿ ಬಾಡಿಗೆ ಪಡೆಯಲಾಗುತ್ತಿದೆ. ಟೆಂಡರ್ ನಲ್ಲಿ ಉತ್ತಮ ದರ ನಿಗದಿಪಡಿಸಿದವರಿಗೆ ಗುತ್ತಿಗೆ ನೀಡಲಾಗುವುದು. ಜಿಎಸ್'ಟಿ ಶೇ.18ರಷ್ಟು ನಿಗದಿಪಡಿಸಲಾಗಿದೆ. ಜಿಎಸ್'ಟಿ ವೆಚ್ಚ ಕಡಿಮೆಯಾದರೆ, ಸುಮಾರು ರೂ.100 ಕೋಟಿ ಉಳಿತಾಯವಾಗಲಿದೆ ಎಂದು ಮಾಹಿತಿ ನೀಡಿದರು.

ಯಂತ್ರ ಬಾಡಿಗೆ ಪಡೆಯುವ ಲೆಕ್ಕಚಾರ ಹಾಗೂ ಖರೀದಿ ಮಾಡಿ ನಿರ್ವಹಣೆ ಮಾಡಿದ ವೆಚ್ಚದ ಲೆಕ್ಕಾಚಾರವನ್ನು ವೆಬ್'ಸೈಟ್'ನಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕರಿಗೆ ವಿವರಣೆ ನೀಡಲಾಗುವುದು. ಜನರು ಸಲ್ಲಿಸುವ ಅಭಿಪ್ರಾಯ, ಅಂಶಗಳನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT