ಐಟಿ/ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಎನ್ 
ರಾಜ್ಯ

ಟೈಯರ್-2-ಟೈಯರ್-3 ನಗರಗಳ ಅಭಿವೃದ್ಧಿಯತ್ತ ಸರ್ಕಾರದ ಗಮನ: ಐಟಿ/ಬಿಟಿ ಕಾರ್ಯದರ್ಶಿ ಮಂಜುಳಾ

ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳಲ್ಲಿ ಬೆಂಗಳೂರಿನ ತಂತ್ರಜ್ಞಾನ ವ್ಯವಸ್ಥೆಯನ್ನು ಪುನರಾವರ್ತಿಸಲು ಸರ್ಕಾರ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಬೆಂಗಳೂರು: ರಾಜ್ಯದ ಟೈಯರ್-2 ಮತ್ತು ಟೈಯರ್-3 ನಗರಗಳಲ್ಲಿ ತಾಂತ್ರಿಕ ಮೂಲಸೌಕರ್ಯ ಅಭಿವೃದ್ಧಿಯತ್ತ ಸರ್ಕಾರ ಗಮನಹರಿಸುತ್ತಿದೆ ಎಂದು ಐಟಿ/ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಎನ್ ಅವರು ಶುಕ್ರವಾರ ಹೇಳಿದರು.

ನಗರದ ಬಿಐಇಸಿಯಲ್ಲಿ ಗುರುವಾರ ಮುಕ್ತಾಯಗೊಂಡ 3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್'ನ ಸಮಾರೋಪದಲ್ಲಿ ಕೃಷಿಕಲ್ಪ ಫೌಂಡೇಶನ್ ಸಿಇಒ ಸಿಎಂ ಪಾಟೀಲ್ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಿಇಒ ಸಂಜೀವ್ ಕುಮಾರ್ ಗುಪ್ತಾ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡ ಐಟಿ/ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಅವರು, ನಾವೀನ್ಯತೆಯ ಶಕ್ತಿಕೇಂದ್ರವಾಗುವ ಭಾರತದ ಪ್ರಯಾಣದಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಜಗತ್ತಿನ ನೈಜ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ ಎಂದ ಅವರು, ರಾಜ್ಯ ಸರ್ಕಾರದ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್)ಗಳನ್ನು ಕುರಿತು ವಿವರಿಸಿದರು.

ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳಲ್ಲಿ ಬೆಂಗಳೂರಿನ ತಂತ್ರಜ್ಞಾನ ವ್ಯವಸ್ಥೆಯನ್ನು ಪುನರಾವರ್ತಿಸಲು ಸರ್ಕಾರ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ರಾಜ್ಯ ಸರ್ಕಾರವು ಆರಂಭಿಕ ಹಂತದ ಹಣಕಾಸಿನ ಅಗತ್ಯವನ್ನು ಅರ್ಥಮಾಡಿಕೊಂಡಿದ್ದು, ನಮ್ಮ ಕಾರ್ಯಕ್ರಮವು ಅರ್ಹ ನವೋದ್ಯಮಗಳಿಗೆ 50 ಲಕ್ಷ ರೂ.ಗಳವರೆಗೆ ಅನುದಾನವನ್ನು ಒದಗಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಆಫೀಸ್ ರೋಮ್ಯಾನ್ಸ್ ಎಫೆಕ್ಟ್: 150 ಕೋಟಿ ರೂ. ಸಂಬಳದ ಉದ್ಯೋಗ ಕಳೆದುಕೊಂಡ ಲಾಯ್ಡ್ಸ್ ಮಾಜಿ ಸಿಇಒ John Neal!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

SCROLL FOR NEXT