Woman techie loses Rs 31.83 crore after being trapped into digital arrest for six months 
ರಾಜ್ಯ

ಮುಂಬೈ ಪೊಲೀಸರ ಹೆಸರಿನಲ್ಲಿ ಕರೆಮಾಡಿ ಬಂಧನ ಬೆದರಿಕೆ; ₹56 ಲಕ್ಷ ಕಳೆದುಕೊಂಡ ನಿವೃತ್ತ ಸೇನಾ ಕರ್ನಲ್‌!

ಈ ಸಂಬಂಧ ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ವಂಚಕರು ಬಂಧಿಸುವ ಬೆದರಿಕೆ ಹಾಕಿದ್ದರಿಂದ ಭಯಭೀತರಾದ 83 ವರ್ಷದ ನಿವೃತ್ತ ಸೇನಾ ಕರ್ನಲ್ ಒಬ್ಬರು ₹56.05 ಲಕ್ಷ ಕಳೆದುಕೊಂಡಿದ್ದಾರೆ.

ಈ ಸಂಬಂಧ ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಅಕ್ಟೋಬರ್ 27 ರಂದು ಕರೆ ಮಾಡಿದ ವ್ಯಕ್ತಿಯೊಬ್ಬ ಸಂತ್ರಸ್ತರಿಗೆ ತಾನು ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸಂಜಯ್ ಪಿಶೆ ಎಂದು ಹೇಳಿಕೊಂಡಿದ್ದಾನೆ. ದೂರುದಾರರ ಹೆಸರಿನಲ್ಲಿರುವ ಸಿಮ್ ಕಾರ್ಡ್ ಅನ್ನು ಸಾರ್ವಜನಿಕರನ್ನು ನಿಂದಿಸಲು ಬಳಸಲಾಗಿದೆ ಎಂದು ಹೇಳಿದ್ದಾನೆ.

ಈ ಸಂಬಂಧ ವಿಚಾರಣೆಗಾಗಿ ಮುಂಬೈಗೆ ಪ್ರಯಾಣಿಸುವಂತೆ ಸೂಚಿಸಿದ್ದಾನೆ. ಆಗ ಸಂತ್ರಸ್ತ ತಾನು ಪ್ರಯಾಣ ಬೆಳೆಸಲು ಸಾಧ್ಯವಿಲ್ಲ ಎಂದಾಗ, ವಿಡಿಯೋ ಕರೆ ಮೂಲಕ ಹಿರಿಯ ಅಧಿಕಾರಿ ಕವಿತಾ ಪೊಮನೆ ಎಂದು ಗುರುತಿಸಿಕೊಂಡ ಮಹಿಳೆ ಮತ್ತು ಉನ್ನತ ಅಧಿಕಾರಿ ಎಂದು ಹೇಳಿಕೊಂಡ ವಿಶ್ವಾಸ್ ಎಂಬ ಇನ್ನೊಬ್ಬ ವ್ಯಕ್ತಿ ಮಾತನಾಡಿದ್ದಾರೆ.

ಕರೆ ಮಾಡಿದವರು ವಿಚಾರಣೆಯನ್ನು ಆನ್‌ಲೈನ್‌ ಮೂಲಕವೇ ನಡೆಸಲಾಗುವುದು ಎಂದು ಹೇಳಿ ಅವರ ವೈಯಕ್ತಿಕ, ಕುಟುಂಬ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡಿದ್ದಾರೆ ಮತ್ತು ಯಾರಿಗಾದರೂ ಬಹಿರಂಗಪಡಿಸಿದರೆ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಪ್ರತಿ ಮೂರು ಗಂಟೆಗಳಿಗೊಮ್ಮೆ ಅವರ ಲೈವ್ ಲೊಕೇಶನ್ ಅನ್ನು ಕಳಿಸುವಂತೆ ಕೇಳಿದ್ದಾರೆ. ಆರ್‌ಬಿಐ ಪರಿಶೀಲನೆಗಾಗಿ ಅವರ ಬ್ಯಾಂಕ್ ವಿವರಗಳನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲು ಸೂಚಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅವರನ್ನು ನಂಬಿದ ದೂರುದಾರರು ವಂಚಕರೊಂದಿಗೆ ನಾಲ್ಕು ಬ್ಯಾಂಕ್ ಖಾತೆಗಳ ವಿವರಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಸೂಚನೆಯ ಮೇರೆಗೆ, ವಂಚಕರು ತಿಳಿಸಿದ ಮತ್ತೊಂದು ಖಾತೆಗೆ 6 ಲಕ್ಷ ರೂ. ಮತ್ತು 5 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾರೆ.

ನಂತರ, ಅವರ ಮ್ಯೂಚುವಲ್ ಫಂಡ್‌ಗಳು ಮತ್ತು ಇತರ ಹೂಡಿಕೆಗಳನ್ನು ಸಹ ಲಿಕ್ವಿಡೇಟ್ ಮಾಡಲು ಸೂಚಿಸಲಾಗಿದೆ. ನಂತರ ಅವರು ತನ್ನ ಬ್ಯಾಂಕ್ ಖಾತೆಗಳಿಂದ ಮತ್ತೆ 35.05 ಲಕ್ಷ ರೂ.ಗಳನ್ನು ಮತ್ತು 10 ಲಕ್ಷ ರೂ.ಗಳನ್ನು ವಂಚಕರು ಹೇಳಿದ್ದ ಅದೇ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ.

ಇದರ ಮರುಪಾವತಿಯನ್ನು ಕೋರಿದಾಗ, ವಂಚಕರು ಆರ್‌ಬಿಐ ಹಣವನ್ನು ಪರಿಶೀಲಿಸುತ್ತಿದೆ ಮತ್ತು ಮೂರು ದಿನಗಳಲ್ಲಿ ಹಣವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ.

ಸಂತ್ರಸ್ತರ ದೂರಿನ ಆಧಾರದ ಮೇಲೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) (ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಆಫೀಸ್ ರೋಮ್ಯಾನ್ಸ್ ಎಫೆಕ್ಟ್: 150 ಕೋಟಿ ರೂ. ಸಂಬಳದ ಉದ್ಯೋಗ ಕಳೆದುಕೊಂಡ ಲಾಯ್ಡ್ಸ್ ಮಾಜಿ ಸಿಇಒ John Neal!

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

SCROLL FOR NEXT