ಬೆಂಗಳೂರು ಎಟಿಎಂ ದರೋಡೆ ಪ್ರಕರಣ 
ರಾಜ್ಯ

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ.

ಚೆನ್ಮೈ: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ ಅದರಲ್ಲಿದ್ದ ಸುಮಾರು 7.11 ಕೋಟಿ ದರೋಡೆ ಮಾಡಿದ್ದರು.

ಈ ದರೋಡೆ ಪ್ರಕರಣದ ಸಂಬಂಧ ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಅಲ್ಲದೆ ಪ್ರಮುಖ ಆರೋಪಿಗಳಾದ ರವಿ ಮತ್ತು ಕಾನ್ಸ್ ಟೇಬಲ್ ಅಣ್ಣಪ್ಪನನ್ನು ಕೂಡ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಇದೀಗ ಈ ಪಟ್ಟಿಗೆ ಮತ್ತೋರ್ವ ಪ್ರಮುಖ ಆರೋಪಿ ಸೇರ್ಪಡೆಯಾಗಿದ್ದು ಕ್ಸೇವಿಯರ್ ಎಂಬಾತನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವ

ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ತಂಡ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಿಡಿದು ತಂದಿದೆ. ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ.ಕ್ಸೇ​ವಿಯರ್ ದರೋಡೆಯ ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ.

ಆರೋಪಿಯು ಕುಪ್ಪಂ ಪ್ರದೇಶದಲ್ಲಿ ಹಣದ ಬಾಕ್ಸ್‌ನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಕೊಂಡಿದ್ದಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಸೆರೆಹಿಡಿದಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಬನಶಂಕರಿ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿದ್ದು, ಸದ್ಯ ಸಿದ್ದಾಪುರ ಠಾಣೆಯಲ್ಲಿ ವಿಚಾರಣೆ ಮುಂದುವರಿದಿದೆ. ಈ ಹಿಂದೆ 5.30 ಕೋಟಿ ರೂ. ವಶಪಡಿಸಿಕೊಳ್ಳಲಾಗಿದ್ದು, ಎಟಿಎಂ ವಾಹನದಿಂದ ದರೋಡೆ ನಡೆಸಿದ್ದ ಆರೋಪಿಗಳ ತೀವ್ರ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಬಣ ಬಡಿದಾಟ, ಅಧಿಕಾರ ಗುದ್ದಾಟ: ಇಂದು ಸಿದ್ದರಾಮಯ್ಯ- ಡಿಕೆಶಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮುಖಾಮುಖಿ ಚರ್ಚೆ ಸಾಧ್ಯತೆ, ತೆರೆ ಎಳೆಯುತ್ತಾರೆಯೇ ಗೊಂದಲಕ್ಕೆ?

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT