ಕೊಲೆ ಆರೋಪಿಗಳ ಬಂಧನ 
ರಾಜ್ಯ

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಬೆಂಗಳೂರು: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆ ಮಾಡಿ ಮೃತದೇಹವನ್ನು ರಸ್ತೆ ಬದಿಯ ಪೊದೆಗೆ ಎಸೆದಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ಕಳ್ಳತನಕ್ಕೂ ಇಳಿದಿದ್ದ ತಮ್ಮನ ಕಾಟ ತಾಳಲಾರದೆ ಒಡ ಹುಟ್ಟಿದವನನ್ನು ಅಣ್ಣನೇ ಮರ್ಡರ್​ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಕೊಲೆಯಾದ ಧನರಾಜ್ ಕಲಬುರಗಿಯಲ್ಲಿಯೇ ತಂದೆ-ತಾಯಿಯ ಜೊತೆ ವಾಸವಿದ್ದ. ಕೆಲಸಕ್ಕೆ ಹೋಗದೆ ಕಳ್ಳತನ ಮಾಡೋದರ ಜೊತೆಗೆ, ಕುಡಿದು ಬಂದು ಹೆತ್ತವರ ಮೇಲೆ ನಿತ್ಯ ಹಲ್ಲೆ ಮಾಡ್ತಿದ್ದ.

ಪ್ರಶ್ನೆ ಮಾಡಿದ ಸಹೋದರ ಶಿವರಾಜನ ಮೇಲೂ ಹಲವು ಬಾರಿ ಹಲ್ಲೆ ನಡೆಸಿದ್ದು, ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದ. ಮೊಬೈಲ್, ಕುರಿ ಸೇರಿದಂತೆ ಸಿಕ್ಕ ಸಿಕ್ಕ ಕಡೆ ಈತ ಕಳ್ಳತನ ಮಾಡುತ್ತಿದ್ದ. ಈತನ ಕೆಲಸದಿಂದಾಗಿ ಅದೆಷ್ಟೋ ಬಾರಿ ಮನೆ ಬಳಿ ಬಂದು ಜನರು ಗಲಾಟೆ ಮಾಡಿದ್ದರು. ಹೀಗಾಗಿ ಸಹೋದರ ಧನರಾಜ್​​ನ ಕಾಟ ತಾಳಲಾರದೆ ಆತನ ಕೊಲೆಗೆ ಸ್ನೇಹಿತರ ಜೊತೆ ಸೇರಿ ಶಿವರಾಜ್​ ಪ್ಲ್ಯಾನ್​​ ಮಾಡಿದ್ದ.

ಅದರ ಭಾಗವಾಗಿ ಕೆಲಸ ಕೊಡಿಸೋದಾಗಿ ಹೇಳಿ ಧನರಾಜ್​​ನನ್ನು ಬೆಂಗಳೂರಿಗೆ ಕರೆದಿದ್ದ. ಬೆಂಗಳೂರಿಗೆ ಬಂದ ಧನರಾಜ್​​ ಕಾರಿನಲ್ಲಿ ಕುಳಿತು ಮೊಬೈಲ್ ನೋಡ್ತಿದ್ದ ವೇಳೆ ಆತನ ಕೈಗಳನ್ನು ಹಿಂಬದಿಯಿಂದ ಶಿವರಾಜ್​​ ಸ್ನೇಹಿತರಾದ ಸಂದೀಪ್ ಮತ್ತು ಪ್ರಶಾಂತ್ ಹಿಡಿದುಕೊಂಡಿದ್ದಾರೆ.

ಈ ವೇಳೆ ಮಚ್ಚಿನಿಂದ ಧನರಾಜ್​​ ಕತ್ತಿನ ಭಾಗಕ್ಕೆ ಹೊಡೆದು ಕಾರಿನಲ್ಲಿಯೇ ಶಿವರಾಜ್​​ ಕೊಲೆ ಮಾಡಿದ್ದಾನೆ. ಬಳಿಕ ಕಗ್ಗಲೀಪುರ ರಸ್ತೆ ಬದಿಯ ಪೊದೆಯಲ್ಲಿ ಶವ ಎಸೆದು ಆರೋಪಿಗಳು ಎಸ್ಕೇಪ್​​ ಆಗಿದ್ದರು.

ಪ್ರಕರಣ ಸಂಬಂಧ ತನಿಖೆ ವೇಳೆ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿದ್ದ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದಾಗ ಆರೋಪಿಗಳು ಶವ ಎಸೆದು ಹೋಗಿರೋದು ಗೊತ್ತಾಗಿದೆ. ಕಾರಿನ ನಂಬರ್ ಆಧರಿಸಿ ಆರೋಪಿಗಳನ್ನು ಬಂಧನ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT