ರಾಜ್ಯ

ಬೆಂಗಳೂರು: 7 ಕೋಟಿ ರೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು ಪೇದೆ ಅಣ್ಣಪ್ಪ ನಾಯ್ಕ್ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್, ಪೇದೆಗಳ ಮಾನಿಟರಿಂಗ್ ಮಾಡುವಂತೆ ಸೂಚಿಸಿದ್ದಾರೆ.

ಸಭೆ ನಡೆಸಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಎಸಿಪಿ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ CMS ಸಂಸ್ಥೆ ಮಾಜಿ ನೌಕರ ಕ್ಸೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಪೇದೆ ಅಣ್ಣಪ್ಪ ನಾಯ್ಕ್, ಹಾಲಿ CMS ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್‌ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದ್ದು ಆರೋಪಿಗಳಿಂದ ರೂ.5.7 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಮುಕ್ತಾಯ: ಪಳೆಯುಳಿಕೆ ಇಂಧನ ಕೊನೆಗೊಳಿಸುವ ವಿಚಾರ ಪ್ರತಿಜ್ಞೆಯಲ್ಲಿಲ್ಲ!

'ತಾಯಿ ಎದೆ ಹಾಲಿನಲ್ಲೇ ಯುರೇನಿಯಂ ಅಂಶ, ಬಿಹಾರದಲ್ಲಿ ಶಿಶುಗಳ ಮೇಲೆ ಮಾರಕ ಪರಿಣಾಮ': ತಜ್ಞರು ಹೇಳಿದ್ದೇನು?

ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!

Video: 'ಮನೆಹಾಳು ಕೆಲಸ ಬೇಡ.. ನನ್ನ ಮತ್ತು ಕುಮಾರಸ್ವಾಮಿ ನಡುವೆ ತಂದಿಡಬೇಡಿ..'; ಮಾಧ್ಯಮಗಳ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

ಫ್ರಾನ್ಸ್ ನೌಕಾ ಪಡೆ ಕೈಲಿ ಸಿಲುಕಿ ಜಾಗತಿಕವಾಗಿ ನಗೆಪಾಟಲಿಗೀಡಾದ ಪಾಕಿಸ್ತಾನ!

SCROLL FOR NEXT