ಕ್ಯಾಬ್ ಚಾಲಕನ ರೂಲ್ಸ್ ಚಾರ್ಟ್ ವೈರಲ್ 
ರಾಜ್ಯ

'ಭಯ್ಯಾ ಅನ್ನಬೇಡಿ, ಆ್ಯಟಿಟ್ಯೂಡ್ ನಿಮ್ಮ ಜೇಬಲ್ಲಿಡಿ': ಪ್ರಯಾಣಿಕರಿಗೆ ಬೆಂಗಳೂರು ಕ್ಯಾಬ್ ಚಾಲಕನ 6 ರೂಲ್ಸ್; ಪೋಸ್ಟ್ ವೈರಲ್!

ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿತ್ಯ ಕ್ಯಾಬ್ ಚಾಲಕರು ಮತ್ತು ಆಟೋ ಚಾಲಕರ ಕುರಿತ ಸುದ್ದಿಗಳು ಹರಿದಾಡುತ್ತಲೇ ಇರುತ್ತವೇ.. ಈ ಪಟ್ಟಿಗೆ ಇದೀಗ ಮತ್ತೊಂದು ಸುದ್ದಿ ಸೇರ್ಪಡೆಯಾಗಿದೆ.

ಬೆಂಗಳೂರಿನ ಕ್ಯಾಬ್‌ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ತಮ್ಮದೇ ಆದ ರೂಲ್ಸ್‌ ಜಾರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದಾರೆ. ತನ್ನ ರೂಲ್ಸ್ ಗಳನ್ನು ಪ್ರಿಂಟ್ ಮಾಡಿ ಇದನ್ನು ತಮ್ಮ ಕ್ಯಾಬ್ ನಲ್ಲಿ ಅಂಟಿಸಿದ್ದಾರೆ.

ಸದ್ಯ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ.

ಪ್ರಯಾಣಿಕರೊಬ್ಬರು ಕ್ಯಾಬ್‌ನ ಡ್ರೈವರ್​​​​ ಸೀಟ್​​​​ ಹಿಂದೆ ಅಂಟಿಸಿರುವ ಪೋಸ್ಟರ್​​ ಬಗ್ಗೆ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ.

ಇಷ್ಟಕ್ಕೂ ಚಾರ್ಟ್ ನಲ್ಲಿರುವ ನಿಯಮಗಳೇನು?

ಕ್ಯಾಬ್ ಚಾಲಕ ಕಾರಿನಲ್ಲಿ ಅಂಟಿಸಿರುವ ಚಾರ್ಟ್ ನಲ್ಲಿ ಒಟ್ಟು 7 ನಿಯಮಗಳಿದ್ದು, ನಿಯಮಗಳನ್ನು ಪಾಲಿಸುವಂತೆ ಖಡಕ್​​​​​​​ ಆಗಿ ಸೂಚಿಸಲಾಗಿದೆ. ಈ 7 ನಿಯಮಗಳ ಪಟ್ಟಿ ಇಂತಿದೆ.

  • ನೀವು ಕ್ಯಾಬ್‌ನ ಮಾಲೀಕರಲ್ಲ

  • ಕ್ಯಾಬ್ ಚಾಲನೆ ಮಾಡುವ ವ್ಯಕ್ತಿಯೇ ಕ್ಯಾಬ್‌ನ ಮಾಲೀಕ

  • ಸಭ್ಯವಾಗಿ ಮಾತನಾಡಿ ಮತ್ತು ಗೌರವದಿಂದ ನಡೆದುಕೊಳ್ಳಿ

  • ನಿಧಾನವಾಗಿ ಕ್ಯಾಬ್ ಬಾಗಿಲನ್ನು ಮುಚ್ಚಿ

  • ನಿಮ್ಮ ವರ್ತನೆಯನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ. ದಯವಿಟ್ಟು ಅದನ್ನು ನಮಗೆ ತೋರಿಸಬೇಡಿ ಏಕೆಂದರೆ ನೀವು ನಮಗೆ ಹೆಚ್ಚು ಹಣ ನೀಡುತ್ತಿಲ್ಲ

  • ನನ್ನನ್ನು ಭಯ್ಯಾ ಅಂತ ಕರೆಯಬೇಡಿ.

  • ವೇಗವಾಗಿ ಓಡಿಸು ಎಂದು ಹೇಳಬೇಡಿ.

ಎಂದು ಕ್ಯಾಬ್ ಚಾಲಕ ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಕಾರು ಚಾಲಕನ ನಿಯಮಗಳನ್ನು ಈ ಪೋಸ್ಟ್ ಮಾಡಿರುವ ಪ್ರಯಾಣಿಕ ಕೂಡ ಬೆಂಬಲಿಸಿದ್ದು, ನಾನು ಈ ಪೋಸ್ಟ್​​ನ್ನು ಬೆಂಬಲಿಸುತ್ತೇನೆ. ಕೆಲವು ಪ್ರಯಾಣಿಕರು ಕ್ಯಾಬ್​​ಗಳನ್ನು ತಮ್ಮ ಸ್ವಂತದ್ದು ಎಂಬಂತೆ ವರ್ತಿಸುತ್ತಾರೆ. ಇದು ಕಠಿಣವಾಗಿದ್ದರು, ಪ್ರಾಮಾಣಿಕವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!