ಸಂಪ್ ನಿಂದ ನೀರು ಸೇದುತ್ತಿರುವ ಮಕ್ಕಳು 
ರಾಜ್ಯ

ಮೈಸೂರು: ಸಂಪ್ ನಿಂದ ನೀರು ಸೇದಿಸಿ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

ಶಾಲಾ ಆವರಣದಲ್ಲಿರುವ ಸಂಪ್ ನಿಂದ ಮಕ್ಕಳು ನೀರು ಸೇದುತ್ತಿರುವುದನ್ನು ನಾನು ನೋಡಿದೆ. ಮೊದಲಿಗೆ, ಯಾರೋ ಬಿದ್ದಿದ್ದಾರೆಂದು ನಾನು ಭಾವಿಸಿದೆ. ನಾನು ಅವರನ್ನು ಕೇಳಿದಾಗ, ಶಿಕ್ಷಕರು ನೀರು ತರಲು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹೇಳಿದ್ದರು ಎಂದು ವಿದ್ಯಾರ್ಥಿಗಳು ತಿಳಿಸಿದರು.

ಮೈಸೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಸಂಪ್ ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಲಗೆರೆಹುಂಡಿ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ನವೆಂಬರ್ 20 ರಂದು ಗ್ರಾಮಸ್ಥರಾದ ಸಿದ್ದರಾಜು ಎಂಬುವವರು ತಮ್ಮ ಮಗಳನ್ನು ಅಂಗನವಾಡಿಯಿಂದ ಕರೆದುಕೊಂಡು ಬರಲು ಶಾಲೆಗೆ ಭೇಟಿ ನೀಡಿದಾಗ ಬೆಳಕಿಗೆ ಬಂದಿದೆ

ಶಾಲಾ ಆವರಣದಲ್ಲಿರುವ ಸಂಪ್ ನಿಂದ ಮಕ್ಕಳು ನೀರು ಸೇದುತ್ತಿರುವುದನ್ನು ನಾನು ನೋಡಿದೆ. ಮೊದಲಿಗೆ, ಯಾರೋ ಬಿದ್ದಿದ್ದಾರೆಂದು ನಾನು ಭಾವಿಸಿದೆ. ನಾನು ಅವರನ್ನು ಕೇಳಿದಾಗ, ಶಿಕ್ಷಕರು ನೀರು ತರಲು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹೇಳಿದ್ದರು ಎಂದು ವಿದ್ಯಾರ್ಥಿಗಳು ತಿಳಿಸಿದರು.

ನಾನು ಘಟನೆಯನ್ನು ನನ್ನ ಸೆಲ್‌ಫೋನ್‌ನಲ್ಲಿ ರೆಕಾರ್ಡ್ ಮಾಡಿ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಗೆ ದೂರು ಸಲ್ಲಿಸಿದೆ. ಬಿಇಒ ನಿರ್ದೇಶನದಂತೆ, ನಂತರ ನಾನು ಲಿಖಿತ ದೂರು ಸಲ್ಲಿಸಿದೆ ಎಂದು ಸಿದ್ದರಾಜು ಹೇಳಿದರು.

ಇತ್ತೀಚೆಗೆ ಕೋಲಾರದಲ್ಲಿ ಒಬ್ಬ ವಿದ್ಯಾರ್ಥಿ ಸಂಪ್ ಗೆ ಬಿದ್ದು ಸಾವನ್ನಪ್ಪಿದ್ದರಿಂದ ಈ ಘಟನೆ ವಿಶೇಷವಾಗಿ ಆತಂಕಕಾರಿಯಾಗಿದೆ. ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಡಿಡಿಪಿಐ ಅವರನ್ನು ಒತ್ತಾಯಿಸುತ್ತೇನೆ. ಶಾಲೆಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಸರಿಯಾದ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಅವರು ಹೇಳಿದರು.

ಸೋಮವಾರದೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಡಿಡಿಪಿಐ ಎಸ್.ಟಿ. ಜವರೇಗೌಡ ಬಿಇಒಗೆ ಸೂಚನೆ ನೀಡಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, 'ಹೀಮ್ಯಾನ್' ಕಳೆದುಕೊಂಡ ಭಾರತೀಯ ಚಿತ್ರರಂಗ!

370ನೇ ವಿಧಿ ರದ್ದತಿ, SIR ಬಗ್ಗೆ ತೀರ್ಪು: 53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!

ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು: ಸಿದ್ದರಾಮಯ್ಯ

"ನಮ್ಮ ಬೇರು ಅರಬ್, ಟರ್ಕಿಯದ್ದಲ್ಲ": ಭಾರತದೊಂದಿಗೆ ಸೇರಲು ಸಿದ್ಧ; ಸಿಂಧ್ ನಲ್ಲಿ ಪಾಕ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ; ರಾಜನಾಥ್ ಹೇಳಿಕೆಗೆ ವ್ಯಾಪಕ ಬೆಂಬಲ!

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ?: ತಂದೆಯ ಪ್ರಾರ್ಥನೆ ಬಳಿಕ ಕಣ್ಣು ಬಿಟ್ಟ ಕೋಮದಲ್ಲಿದ್ದ ಬಾಲಕ!, Video

SCROLL FOR NEXT