ಡಿಕೆಶಿವಕುಮಾರ್ ಸಿಎಂ ಆಗಲೆಂದು ಪ್ರಾರ್ಥಿಸಿ ಪೂಜೆ 
ರಾಜ್ಯ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಬ್ಯಾನರ್ ಅಡಿಯಲ್ಲಿ ಒಕ್ಕಲಿಗ ಸಮುದಾಯದ ಸದಸ್ಯರು ಮತ್ತು ಹಲವಾರು ಕನ್ನಡ ಕಾರ್ಯಕರ್ತರು 101 ಗಣಪತಿ ದೇವಸ್ಥಾನದಲ್ಲಿ ಜಮಾಯಿಸಿ ತೆಂಗಿನಕಾಯಿ ಒಡೆದರು.

ಮೈಸೂರು: ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರಕ್ಕೆ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ವಿವಿಧೆಡೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಬೇಕೆಂದು ಅಭಿಮಾನಿಗಳು, ಕಾರ್ಯಕರ್ತರು ಪೂಜೆ ಸಲ್ಲಿಸಿ ದೇವರ ಮೊರೆ ಹೋಗಿದ್ದಾರೆ.

ಸೋಮವಾರ ಡಿಕೆಶಿ ಅಭಿಮಾನಿಗಳ ಹಲವು ಚಟುವಟಿಕೆಗಳು ಗಮನ ಸೆಳೆದವು, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸಿದರು.

ಡಿ,ಕೆ ಶಿವಕುಮಾರ್ ಅವರ ಉನ್ನತ ಹುದ್ದೆಗೆ ಏರಲು ಪ್ರಾರ್ಥನೆ ಸಲ್ಲಿಸಿ ಶಬರಿಮಲೆಗೆ ತೆರಳಿದರು, ಅವರ ರಾಜಕೀಯ ಯಶಸ್ಸಿಗೆ ತಾವು ಅಯ್ಯಪ್ಪ ದೇವಾಲಯಕ್ಕೆ ಪ್ರಯಾಣ ಮಾಡುತ್ತಿರುವುದಾಗಿ ತಿಳಿಸಿದರು.

ಅಖಿಲ ಕರ್ನಾಟಕ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಮಾನಿ ಬಳಗ ರಾಘವೇಂದ್ರ ಅವರು, "ನಮ್ಮ ಪ್ರಾರ್ಥನೆಗಳು ರಾಜಕೀಯ ಒತ್ತಡವಲ್ಲ, ಆದರೆ ಲಕ್ಷಾಂತರ ಬೆಂಬಲಿಗರು ಅವರಲ್ಲಿ ಭರವಸೆ ಇರಿಸಿದ್ದಾರೆ ಎಂದು ಹೇಳಿದರು.

ಈ ಮಧ್ಯೆ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಬ್ಯಾನರ್ ಅಡಿಯಲ್ಲಿ ಒಕ್ಕಲಿಗ ಸಮುದಾಯದ ಸದಸ್ಯರು ಮತ್ತು ಹಲವಾರು ಕನ್ನಡ ಕಾರ್ಯಕರ್ತರು 101 ಗಣಪತಿ ದೇವಸ್ಥಾನದಲ್ಲಿ ಜಮಾಯಿಸಿ ತೆಂಗಿನಕಾಯಿ ಒಡೆದರು.

ಸಂಘದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಅವರು ಪೂಜಾ ಕೈಂಕರ್ಯಗಳು ರಾಜಕೀಯವಲ್ಲ, ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಮುಖ್ಯಮಂತ್ರಿಯಾಗುವುದನ್ನು ನೋಡುವ ಬಯಕೆ ಎಂದು ಹೇಳಿದರು. "ಡಿಕೆ ಶಿವಕುಮಾರ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿದ್ದಾರೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಔಪಚಾರಿಕ ಘೋಷಣೆ ಮಾಡುವ ಸಮಯ ಬಂದಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್