ಸಂಗ್ರಹ ಚಿತ್ರ 
ರಾಜ್ಯ

1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!

ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ.

ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದರು.

900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಭಾಂಶು ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ, ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ನನ್ನ ಕರ್ತವ್ಯ ಎಂದು ತಿಳಿಸಿದರು.

ಸುಮಾರು 40 ವರ್ಷಗಳ ಹಿಂದೆ ರಾಕೇಶ್ ಶರ್ಮಾ ಅವರು ಬಾಹ್ಯಾಕಾಶಕ್ಕೆ ಹೋದಾಗ ನಮಗೆ ಉಂಟಾದ ರೋಮಾಂಚನವನ್ನು ಶುಕ್ಲಾ ಅವರು ಮತ್ತೆ ನೆನಪಿಸುತ್ತಿದ್ದಾರೆ. ಅಂದು ನಮ್ಮ ದೇಶದ ಜನಸಂಖ್ಯೆ 100 ಕೋಟಿಗಿಂತ ಕಡಿಮೆಯಿತ್ತು. ಇಂದು 140 ಕೋಟಿ ಜನರ ಕನಸನ್ನು ಶುಕ್ಲಾ ಅವರು ಹೊತ್ತು ಸಾಗುತ್ತಿದ್ದಾರೆ. ಲಖನೌದಲ್ಲಿ ಕಷ್ಟಪಟ್ಟು ಓದಿ, ಇಂದು ಈ ಸ್ಥಾನಕ್ಕೆ ಏರಿರುವ ಅವರ ಸಾಧನೆ ಮಕ್ಕಳಿಗೆ ಮಾದರಿಯಾಗಬೇಕು ಎಂದರು.

ಈ ನಡುವೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಬಾಹ್ಯಾಕಾಶ, ವಿಜ್ಞಾನ ಮತ್ತು ಗಗನಯಾನದ ಕುರಿತು ವಿದ್ಯಾರ್ಥಿಗಳು ಕೇಳಿದ ಕುತೂಹಲಕಾರಿ ಪ್ರಶ್ನೆಗಳಿಗೆ ಶುಕ್ಲಾ ಅವರು ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT