ಮಹಾಂತೇಶ ಬೀಳಗಿ 
ರಾಜ್ಯ

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್​​ ಬೀಳಗಿ ಸೇರಿ ಅಪಘಾತದಲ್ಲಿ ಮೃತಪಟ್ಟ ಒಟ್ಟು ನಾಲ್ವರ ಅಂತ್ಯಕ್ರಿಯೆಯನ್ನು ಏಕಕಾಲಕ್ಕೆ ನೆರವೇರಿಸಲಾಯಿತು.

ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್​ ಅಧಿಕಾರಿ ಮಹಾಂತೇಶ್​ ಬೀಳಗಿ ಅವರು ತಮ್ಮ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪಂಚಭೂತಗಳಲ್ಲಿ ಲೀನವಾದರು.

ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್​​ ಬೀಳಗಿ ಸೇರಿ ಅಪಘಾತದಲ್ಲಿ ಮೃತಪಟ್ಟ ಒಟ್ಟು ನಾಲ್ವರ ಅಂತ್ಯಕ್ರಿಯೆಯನ್ನು ಏಕಕಾಲಕ್ಕೆ ನೆರವೇರಿಸಲಾಯಿತು.

ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದು, ಮಹಾಂತೇಶ್​​ ಬೀಳಗಿ ಅವರ ತಾಯಿ ಸಮಾಧಿ ಪಕ್ಕದಲ್ಲೇ ಅವರ ಅಂತಿಮ ಕಾರ್ಯ ನಡೆದಿದೆ.

ಇದಕ್ಕೂ ಮುನ್ನ ರಾಮದುರ್ಗ ಪಟ್ಟಣದ ಪಂಚಗಟ್ಟಿಮಠ ಶಾಲಾ ಮೈದಾನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಜನ ಆಗಮಿಸಿ ಅಂತಿಮ ದರ್ಶನ ಪಡೆದರು.

ಪ್ರಾದೇಶಿಕ ಆಯುಕ್ತೆ ಜಾನಕಿ, ಜಿ.ಪಂ.ಸಿಇಒ ರಾಹುಲ್ ಶಿಂಧೆ, ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ ಸೇರಿದಂತೆ ಹಲವು ಗಣ್ಯರು ಬೀಳಗಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಹಾಂತೇಶ ಅವರ ಪತ್ನಿ ರೇಖಾ ಮತ್ತು ಪುತ್ರಿ ಚೈತನ್ಯಾ ಅವರಿಗೆ ಧೈರ್ಯ ತುಂಬಿದರು.

ಈ ವೇಳೆ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು.

ಸಾವಿನ ಸಂಖ್ಯೆ 4ಕ್ಕೇರಿಕೆ

ಈ ಅಪಘಾತದಲ್ಲಿ ಮೃಪಟ್ಟವರ ಸಂಖ್ಯೆ ಇದೀಗ ನಾಲ್ಕಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಸಿರಸಂಗಿ ಅವರು ಇಂದು ನಸುಕಿನಲ್ಲಿ ಮೃತಪಟ್ಟಿದ್ದಾರೆ. ಅವಘಡದಲ್ಲಿ ಈರಣ್ಣ ಬೀಳಗಿ, ಶಂಕರ್ ಬೀಳಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕಾರು ಚಾಲಕ ರಾಜು ಅವರು ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT