ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ 
ರಾಜ್ಯ

ಅಧಿಕಾರ ಹಂಚಿಕೆ ವಿಚಾರ: 'ಕೊಟ್ಟ ಮಾತು' ಕುರಿತ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಸಿಎಂ ಸಿಡಿಮಿಡಿ; Video

ಈ ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡ ಸಿದ್ದರಾಮಯ್ಯ ಅವರು, ಏನ್ ಕೊಟ್ಟ..? ಹೈಕಮಾಂಡ್ ಹೇಳಿದ್ದಂತೆ ಅಂತ ಹೇಳಿಲ್ವಾ? ಮತ್ತೇನು ಸಿಟ್ಟಿನಲ್ಲಿ ಹೇಳಿದರು.

ಬೆಂಗಳೂರು: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದ ಕುರಿತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮೇಲೆ ಕೆಂಡಾಮಂಡಲಗೊಂಡ ಪ್ರಸಂಗ ಶನಿವಾರ ನಡೆಯಿತು.

ಡಿಸಿಎಂ ಡಿ ಕೆ ಶಿವಕುಮಾರ್ ಜೊತೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಈ ವೇಳೆ ಸುದ್ದಿಗಾರರು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಬಳಿ ಕೊಟ್ಟ ಮಾತಿನ ಕುರಿತು ಪ್ರಶ್ನೆ ಕೇಳಿದರು.

ಈ ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡ ಸಿದ್ದರಾಮಯ್ಯ ಅವರು, ಏನ್ ಕೊಟ್ಟ..? ಹೈಕಮಾಂಡ್ ಹೇಳಿದ್ದಂತೆ ಅಂತ ಹೇಳಿಲ್ವಾ? ಮತ್ತೇನು ಸಿಟ್ಟಿನಲ್ಲಿ ಹೇಳಿದರು.

ಹೈಕಮಾಂಡ್ ಹೇಳಿದ್ದನ್ನು ಮಾಡುತ್ತೇವೆ ಎಂದು ಹೇಳಿದ ಮೇಲೆ ಕೊಟ್ಟ ಮಾತಿನಂತೆ ಎಂಬ ಪ್ರಶ್ನೆ ಎಲ್ಲಿ ಬರುತ್ತದೆ. ಈ ವೇಳೆ ಡಿಕೆ.ಶಿವಕುಮಾರ್ ಅವರು ಕೂಡ ನಗುತ್ತಿರುವುದು ಕಂಡು ಬಂದಿತು. ಬಳಿಕ ಮಾಧ್ಯಮಗಳು ಸರಣಿ ಪ್ರಶ್ನೆ ಕೇಳಿದ್ದು, ಈ ವೇಳೆ ಗದ್ದಲ ಶುರುವಾಗಿತ್ತು.

ನಂತರ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮೊದಲು ನಾವು ಹೇಳಿದ್ದು ಕೇಳಿ ನಾವು ನಿಮ್ಮನ್ನ ಕರೆಸಿದ್ದೇವೆ. ಮೊದಲು ನೀವು ನಾವ್ ಹೇಳೋದು ಕೇಳಿ ಎಂದ ಗರಂ ಆಗಿಯೇ ಹೇಳಿದರು.

ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇನೆ. ನಮ್ಮಲ್ಲಿ ಇರೋದು ಒಂದೇ ಗುಂಪು, ಕಾಂಗ್ರೆಸ್​ ಹೈಕಮಾಂಡ್ ಗುಂಪು ಎಂದು ಹೇಳಿದರು.

ನಾನು, ಸಿಎಂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾನು ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಮಾತಿಗೆ ಎದುರಾಡಿಲ್ಲ. 2028ಕ್ಕೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೆ. ಇದಕ್ಕೆ ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ ಒಮ್ಮತದಿಂದ ಆಡಳಿತ ಮಾಡಿಕೊಂಡು ಹೋಗುತ್ತೇವೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

SCROLL FOR NEXT