ನಂದಿನಿ ತುಪ್ಪ  
ರಾಜ್ಯ

ಕೆಟ್ಟ ಮೇಲೆ ಬುದ್ದಿ ಕಲಿತ KMF: ಫೇಕ್ ನಂದಿನಿ ತುಪ್ಪ ಕಡಿವಾಣಕ್ಕೆ ಭರ್ಜರಿ ಪ್ಲಾನ್; ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್!

ಕೆಎಂಎಫ್‌ಗೂ ನಕಲಿ ಉತ್ಪನ್ನಗಳ ಹಾವಳಿ ಜೋರಾಗಿ ತಟ್ಟಿದೆ. ಅದೂ ಪದೇ ಪದೇ ನಕಲಿ ಹಾವಳಿಗೆ ಸಿಲುಕಿ ನಲುಗುತ್ತಿರೋ ಕೆಎಂಎಫ್ ಈಗ ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪ್ಲಾನ್ ರೂಪಿಸಿದೆ.

ಬೆಂಗಳೂರು: ನಮ್ಮ ಹೆಮ್ಮೆಯ ನಂದಿನಿ ತುಪ್ಪಕ್ಕೆ ಎಲ್ಲೆಲ್ಲಿದ ಬೇಡಿಕೆ ಇದೆ. ಅದರಲ್ಲೂ ತಿರುಪತಿ ತಿಮ್ಮಪ್ಪನಿಗೂ ನಮ್ಮ ಕೆಂಎಫ್ ನಂದಿನಿ ತುಪ್ಪ ಬೇಕು. ಇದನ್ನೇ ಬಂಡವಾಳ ಮಾಡಿಕೊಂಡ ನಕಲಿ ತುಪ್ಪ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ. ಇದಕ್ಕೆ ಕಡಿವಾಣ ಹಾಕಲು ಇದೀಗ ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿದೆ.

ಕೆಎಂಎಫ್‌ಗೂ ನಕಲಿ ಉತ್ಪನ್ನಗಳ ಹಾವಳಿ ಜೋರಾಗಿ ತಟ್ಟಿದೆ. ಅದೂ ಪದೇ ಪದೇ ನಕಲಿ ಹಾವಳಿಗೆ ಸಿಲುಕಿ ನಲುಗುತ್ತಿರೋ ಕೆಎಂಎಫ್ ಈಗ ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪ್ಲಾನ್ ರೂಪಿಸಿದೆ. ಇಡೀ ದೇಶದಲ್ಲಿ ತನ್ನದೇ ಆದ ವಿಶಿಷ್ಟ ರುಚಿ ಹೊಂದಿರೋ ಕೆಎಂಎಫ್ ತುಪ್ಪವನ್ನ ನಕಲಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಈ ನಕಲಿ ತುಪ್ಪ ಜಾಲವನ್ನ ಪತ್ತೆ ಹಚ್ಚಿದ್ದ ಕೆಎಂಎಫ್ ಈಗ ರಾಜ್ಯಾದ್ಯಂತ ನಕಲಿ ತುಪ್ಪ ಹಾವಳಿ ತಡೆಗಟ್ಟೋಕೆ ನೇರ ಹೆಡ್ ಶಾಟ್ ಕೊಡಲು ಪ್ಲಾನ್ ರೂಪಿಸುತ್ತಿದೆ.

ಕೆಟ್ಟ ಮೇಲೆ ಕೊನೆಗೂ ಬುದ್ದಿ ಕಲಿತ ಕೆಎಂಎಫ್ ನಂದಿನಿ ಬ್ರ‍್ಯಾಂಡ್‌ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.

ಆ ಮೂಲಕ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಗೊತ್ತಾಗಲಿದೆ. ಆದರೆ ಇದಕ್ಕೆ ಆಗುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ಕೆಎಂಎಫ್ ಭರಿಸಲು ಮುಂದಾಗಿದೆ.

ಕ್ಯೂಆರ್ ಕೋಡ್‌ನಲ್ಲಿ ಏನಿರುತ್ತೆ?

ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ

ಯಾವ ಡಿಪೋಗೆ ಸರಬರಾಜು ನೀಡಲಾಗಿದೆ

ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ

ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇದರಲ್ಲಿ ಇರುತ್ತದೆ. ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ಗ್ರಾಹಕರು ಖರೀದಿ ಮಾಡಿರೋದು ಅಸಲಿಯೋ ನಕಲಿಯೋ ಅನ್ನೋದು ಗ್ರಾಹಕರೇ ತಿಳಿಯಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ..!

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ

ದೆಹಲಿಯಲ್ಲಿ ಡಿಕೆಶಿ ನಂಬರ್ ಗೇಮ್: ಹೈಕಮಾಂಡ್ ತೀರ್ಮಾನವೇ ಫೈನಲ್ ಎಂದ ಸಿಎಂ!

SCROLL FOR NEXT