ಭಾರತೀಯ ನೌಕಾಪಡೆಯ ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ ಪ್ರಕಾಶ ಉಪಾಧ್ಯಾಯ 
ರಾಜ್ಯ

'ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಜತೆಗೆ ಶಿಕ್ಷಣಿಕ ಒಪ್ಪಂದಕ್ಕೆ ಸಹಕಾರ ನೀಡಲು ಸಿದ್ಧ': ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ

ವಿಟಿಯು ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯುನ್ನತ ಕೇಂದ್ರ ಸ್ಥಾಪನೆಗೆ ಮುಂದಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ" ಭರವಸೆ ನೀಡಿದರು.

ಬೆಂಗಳೂರು: ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಜತೆಗೆ ಶಿಕ್ಷಣಿಕ ಒಪ್ಪಂದಕ್ಕೆ ಸಹಕಾರ ನೀಡಲು ನಾವು ಸಿದ್ಧರಿರುವುದಾಗಿ ಭಾರತೀಯ ನೌಕಾಪಡೆಯ ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ ಪ್ರಕಾಶ ಉಪಾಧ್ಯಾಯ ಹೇಳಿದ್ದಾರೆ.

ಬೆಂಗಳೂರಿನ ನಾಗರಭಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ಬೆಂಗಳೂರು ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, "ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಶೈಕ್ಷಣಿಕ ಒಪ್ಪಂದಗಳ ಅವಶ್ಯಕತೆ ಇದೆ.

ವಿಟಿಯು ಕುಲಪತಿ ಡಾ. ಎಸ್. ವಿದ್ಯಾಶಂಕರ್ ಅವರ ದೃಷ್ಟಿಪೂರ್ಣ ನಾಯಕತ್ವದಲ್ಲಿ, ವಿಟಿಯು ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯುನ್ನತ ಕೇಂದ್ರ ಸ್ಥಾಪನೆಗೆ ಮುಂದಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ" ಭರವಸೆ ನೀಡಿದರು.

ವಿಟಿಯು ಸಂಶೋಧನೆ ಮತ್ತು ಅಭಿವೃದ್ಧಿ, ಏರೋಸ್ಪೇಸ್ ಮತ್ತು ರಕ್ಷಣಾ ನಿರ್ದೇಶಕ ಡಾ. ಕಮಾಂಡರ್ ದೇವೇಂದ್ರ ಸಿಂಗ್ ಮಾತನಾಡಿ, "ಶೈಕ್ಷಣಿಕ ಮತ್ತು ರಕ್ಷಣಾ ಇಲಾಖೆಯ ಅಗತ್ಯವನ್ನು ಹೆಚ್ಚಿದ್ದು, ಇದಕ್ಕೆ ರಕ್ಷಣಾ ಇಲಾಖೆಯ ಸಹಕಾರ ಅತ್ಯಗತ್ಯವಾಗಿದೆ. ಇದಕ್ಕಾಗಿ ವಿಟಿಯು ಮತ್ತು ಭಾರತೀಯ ನೌಕಾಪಡೆಯ ನಡುವೆ ಅಧಿಕೃತ ಶೈಕ್ಷಣಿಕ ಒಪ್ಪಂದ ಅಗತ್ಯವಿದೆ" ಎಂದರು.

ಭೇಟಿಯ ಭಾಗವಾಗಿ ಪ್ರಕಾಶ ಉಪಾಧ್ಯಾಯ ಅವರು ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ಧಿಪಡಿಸಿದ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಆವಿಷ್ಕಾರಗಳ ಪ್ರದರ್ಶನವನ್ನು ವೀಕ್ಷಿಸಿದರು. ಸ್ಟಾರ್ಟ್‌ಅಪ್ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿದರು.ವಿಟಿಯು ಬೆಂಗಳೂರು ಪ್ರಾದೇಶಿಕ ಕಚೇರಿಯ ವಿಶೇಷಾಧಿಕಾರಿ .ಡಾ. ಅಜಿತ್ ಪದ್ಯಾಣ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

ಟಿ20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ, ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

ಟಿ20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್, ದಾಖಲೆಗಳ ಮಳೆ, ಎಲೈಟ್ ಗ್ರೂಪ್ ಸೇರಿದ Ishan Kishan!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

News wrap 12-02-2026| ನಾನು ರಾಜಕಾರಣ ಮಾಡೋಕೇ ದಿಲ್ಲಿಗೆ ಬಂದಿರೋದು- DKS; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್; ಶಾಸಕ ಆರಗ ಜ್ಞಾನೇಂದ್ರ PA ಬಂಧನ

SCROLL FOR NEXT