ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪ್ರಿಯಕರನ ಜೊತೆಗೂಡಿ ಪತಿ ಕೊಲೆ; ಪತ್ನಿ ಸೇರಿ ಮೂವರ ಬಂಧನ

ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ.

ಬೆಂಗಳೂರು: ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.

ಬ್ಯಾಡರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಮೇಲ್ವಿಚಾರಕ ವೀರಭದ್ರ ಹಾಗೂ ಆತನ ಸ್ನೇಹಿತ ಅನಿಲ್ ಇತರ ಆರೋಪಿಗಳಾಗಿದ್ದಾರೆ. ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಶರಣಮ್ಮ ಮತ್ತು ವೀರಭದ್ರ ನಡುವೆ ಸಂಬಂಧವಿತ್ತು. ಆಕೆಯ ಪತಿಗೆ ಇದು ತಿಳಿದಾಗ, ವೀರಭದ್ರನಿಂದ ದೂರವಿರಲು ಎಚ್ಚರಿಸಿದರು. ಇದರಿಂದ ಕೋಪಗೊಂಡ ಶರಣಮ್ಮ ಮತ್ತು ವೀರಭದ್ರ ಸುರೇಶ್ ಅವರನ್ನು ಕೊಲ್ಲಲು ಯೋಜಿಸಿದ್ದರು ಎನ್ನಲಾಗಿದೆ.

ಭಾನುವಾರ, ಸುರೇಶ್ ಕುಡಿದ ಮತ್ತಿನಲ್ಲಿದ್ದಾಗ, ಶರಣಮ್ಮ ವೀರಭದ್ರನನ್ನು ಮನೆಗೆ ಕರೆದಿದ್ದಾಳೆ. ನಂತರ ಆತನ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ತಲೆಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ನಂತರ ಅನಿಲ್‌ಗೆ ಕರೆ ಮಾಡಿ ಸುರೇಶ್‌ನ ಶವವನ್ನು ಕಾರಿನಲ್ಲಿ ಗಂಗೊಂಡನಹಳ್ಳಿಗೆ ಸಾಗಿಸಿದ್ದಾರೆ. ಸಾಕ್ಷಿ ನಾಶಮಾಡಲು ಅವರು ಪೆಟ್ರೋಲ್ ಸುರಿದು, ದೇಹವನ್ನು ಸುಟ್ಟು ಹಾಕಿದರು. ಶರಣಮ್ಮ ತನ್ನ ಮನೆಯಿಂದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel