ಸಂಗ್ರಹ ಚಿತ್ರ 
ರಾಜ್ಯ

ತ್ಯಾಜ್ಯ ನೀರು ಸಂಸ್ಕರಣೆ: ಸ್ಟಾರ್ಟ್ಅಪ್ ಸಂಸ್ಥೆಗಳಿಗೆ BWSSB ಆಹ್ವಾನ

ಈ ಯೋಜನೆಯ ಸ್ಟಾರ್ಟ್ಅಪ್ ಸಂಸ್ಥೆಗಳಿಗೆ ಕೇವಲ ನೀರು ಒದಗಿಸುವುದಷ್ಟೇ ಅಲ್ಲದೆ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಸುವರ್ಣಾವಕಾಶ ನೀಡಲಿದೆ.

ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಸ್ಟಾರ್ಟ್ಅಪ್ ಸಂಸ್ಥೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಆಹ್ವಾನ ನೀಡಿದೆ.

ಬೋಸನ್ ವೈಟ್‌ವಾಟರ್ ಸ್ಥಾಪಿಸಿದ ಶುದ್ಧೀಕರಣ ಯಂತ್ರೋಪಕರಣಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದ ಬಿಡಬ್ಲ್ಯೂಎಸ್ಎಸ್'ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಮಾತನಾಡಿದರು.

ಈ ಯೋಜನೆಯ ಸ್ಟಾರ್ಟ್ಅಪ್ ಸಂಸ್ಥೆಗಳಿಗೆ ಕೇವಲ ನೀರು ಒದಗಿಸುವುದಷ್ಟೇ ಅಲ್ಲದೆ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಸುವರ್ಣಾವಕಾಶ ನೀಡಲಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ನಗರದ ನೀರಿನ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಮಂಡಳಿ ಈ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಯೋಜನೆಯ ಮೊದಲ ಭಾಗವಾಗಿ, ಕಾಡುಬೀಸನಹಳ್ಳಿ ತ್ಯಾಜ್ಯ ನೀರು ಶುದ್ಧೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ಬೋಸನ್ ವೈಟ್ ವಾಟರ್ ಸಂಸ್ಥೆಗೆ ಅನುಮತಿ ನೀಡಲಾಗಿದೆ. ಈ ಮೂಲಕ ದಿನಕ್ಕೆ 70,000 ಲೀಟರ್‌ಗಳಷ್ಟು ಗುಣಮಟ್ಟದ ಸಂಸ್ಕರಿಸಿದ ನೀರು ಬಳಕೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಯೋಜನೆಯ ಮೂಲಕ ಹೊರ ವರ್ತುಲ ರಸ್ತೆಯ ಉದ್ದಕ್ಕೂ ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ನೀರನ್ನು ಸರಬರಾಜು ಮಾಡಲಾಗುವುದು, ಇದು ನಗರದ ಸಿಹಿನೀರಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಜಲಮಂಡಳಿಯು ಈ ಯೋಜನೆಯಡಿ ಯಾವುದೇ ಬಂಡವಾಳ ಹೂಡಿಕೆ ಮಾಡುವುದಿಲ್ಲ. ಬದಲಿಗೆ, ಬೋಸನ್ ಸಂಸ್ಥೆ ಸ್ವಂತ ವೆಚ್ಚದಲ್ಲಿ ಅಗತ್ಯವಿರುವ ಅತ್ಯಾಧುನಿಕ ಶುದ್ಧೀಕರಣ ಉಪಕರಣಗಳನ್ನು ಅಳವಡಿಸಲಿದೆ. ಜಲಮಂಡಳಿಯು ಕಚ್ಚಾ ವಸ್ತುವಾಗಿ ತ್ಯಾಜ್ಯ ನೀರನ್ನು ಸರಬರಾಜು ಮಾಡಲಿದ್ದು, ಸಂಸ್ಕರಿಸಿದ ನೀರನ್ನು ಮಾರಾಟ ಮಾಡಲು ಮಾರುಕಟ್ಟೆ ಸಂಪರ್ಕ ಒದಗಿಸಲು ಸಹಾಯ ಮಾಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT