ಗೃಹ ಸಚಿವ ಡಾ. ಜಿ ಪರಮೇಶ್ವರ 
ರಾಜ್ಯ

ಪೊಲೀಸ್ ನೇಮಕಾತಿ: ವಯೋಮಿತಿ ಶಾಶ್ವತ ಸಡಿಲಿಕೆಗೆ ಚಿಂತನೆ; ಗೃಹ ಸಚಿವ ಜಿ ಪರಮೇಶ್ವರ

ವಯೋಮಿತಿ ಸಡಿಲಿಕೆ ಕುರಿತು ನಾವು ಇತರ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ. ಅಲ್ಲಿ 27, 30 ಮತ್ತು 33 ವರ್ಷಗಳನ್ನು ಗರಿಷ್ಠ ವಯೋಮಿತಿಯಾಗಿ ನಿಗದಿಪಡಿಸಿವೆ. ನಾವು ಅವರ ನಿಯಮಗಳನ್ನು ಅಧ್ಯಯನ ಮಾಡುತ್ತೇವೆ.

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್‌ಗಳು, ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳು (ಪಿಎಸ್‌ಐ) ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳ (ಪಿಐ) ನೇಮಕಾತಿಗೆ ಮೂರು ಸ್ಲ್ಯಾಬ್‌ಗಳಲ್ಲಿ ಪ್ರತ್ಯೇಕ ಮತ್ತು ಶಾಶ್ವತ ವಯೋಮಿತಿ ಸಡಿಲಿಕೆಗೆ ಗೃಹ ಇಲಾಖೆಯು ಒಂದು ವಾರದೊಳಗೆ ಕೇಡರ್ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರ ವಯೋಮಿತಿ ಒಂದು ಬಾರಿಗೆ ಅನ್ವಯ ಆಗುವಂತೆ ಎಲ್ಲ ಇಲಾಖೆಗಳಲ್ಲಿ ನೇಮಕಾತಿಗಾಗಿ 2027 ರವರೆಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಘೋಷಿಸಿದ್ದಾರೆ. ಆದರೆ, ಗೃಹ ಇಲಾಖೆಯಲ್ಲಿ, ನಾವು ವಯೋಮಿತಿಯನ್ನು ಶಾಶ್ವತವಾಗಿ ಸಡಿಲಿಸುತ್ತೇವೆ ಎಂದರು.

ವಯೋಮಿತಿ ಸಡಿಲಿಕೆ ಕುರಿತು ನಾವು ಇತರ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ. ಅಲ್ಲಿ 27, 30 ಮತ್ತು 33 ವರ್ಷಗಳನ್ನು ಗರಿಷ್ಠ ವಯೋಮಿತಿಯಾಗಿ ನಿಗದಿಪಡಿಸಿವೆ. ನಾವು ಅವರ ನಿಯಮಗಳನ್ನು ಅಧ್ಯಯನ ಮಾಡುತ್ತೇವೆ ಮತ್ತು ನಮ್ಮದೇ ಆದ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸುತ್ತೇವೆ' ಎಂದು ಅವರು ಹೇಳಿದರು.

ಈಮಧ್ಯೆ, ಕೇಂದ್ರವು 2026ರಲ್ಲಿ ಜಾತಿ ಗಣತಿ ಸೇರಿದಂತೆ ಜನಗಣತಿಯನ್ನು ನಡೆಸುವ ಸಾಧ್ಯತೆಯಿರುವುದರಿಂದ, ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗೊಂದಲ ಸೃಷ್ಟಿಸಬೇಡಿ ಎಂದು ಅವರು ವಿರೋಧ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಮನವಿ ಮಾಡಿದರು.

'ಕೇಂದ್ರದ ಜನಗಣತಿ ಈಗಾಗಲೇ ವಿಳಂಬವಾಗಿದೆ. ಆದರೆ, ರಾಜ್ಯವು ಅದನ್ನು ಮಾಡುತ್ತಿದೆ. ನಡೆಯುತ್ತಿರುವ ಸಮೀಕ್ಷೆಯು ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಒದಗಿಸುವುದರಿಂದ ಯಾವುದೇ ದುರುಪಯೋಗವಾಗುವುದಿಲ್ಲ' ಎಂದು ಅವರು ಹೇಳಿದರು.

ಸಮೀಕ್ಷೆಯು ವೇಗ ಪಡೆದುಕೊಂಡಿರುವುದರಿಂದ, ಅಕ್ಟೋಬರ್ 7 ರ ನಿಗದಿತ ಸಮಯದೊಳಗೆ ನಾವು ಸಮೀಕ್ಷೆಯನ್ನು ಪೂರ್ಣಗೊಳಿಸುತ್ತೇವೆ. ನನ್ನ ಜಿಲ್ಲೆಯಲ್ಲಿ (ತುಮಕೂರು), ಒಟ್ಟು 7.5 ಲಕ್ಷ ಕುಟುಂಬಗಳಲ್ಲಿ 2 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ' ಎಂದರು.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ಯಾವುದೇ ಪ್ರಸ್ತಾಪದ ಬಗ್ಗೆ ತನಗೆ ತಿಳಿದಿಲ್ಲ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ: ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ಮಂತ್ರಿಗಿರಿಗಾಗಿ ಲಾಬಿ ಶುರು..!

'ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ರಾಹುಲ್ ಗಾಂಧಿಯವರಿಗೆ ಧೈರ್ಯ ತುಂಬಿದ್ದೇನೆ': ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿಕೆ ಶಿವಕುಮಾರ್

ಬಿಹಾರದಲ್ಲಿ NDA ಗೆಲುವು ಬೆನ್ನಲ್ಲೇ BJP ರಾಜ್ಯಾಧ್ಯಕ್ಷ ಕುರಿತು ಚರ್ಚೆ ಶುರು: ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆಂದು ವಿಜಯೇಂದ್ರ ವಿಶ್ವಾಸ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಅಕ್ರಮದಿಂದ ರಾಜ್ಯಕ್ಕೆ 44 ಕೋಟಿ ರೂ. ನಷ್ಟ, ಕೈ' ಶಾಸಕ ಸತೀಶ್ ಸೈಲ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

SCROLL FOR NEXT