ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧ ಪೂಜೆ  
ರಾಜ್ಯ

ಮೈಸೂರು ಅರಮನೆಯಲ್ಲಿ ಸುಂದರವಾಗಿ ನೆರವೇರಿದ ಆಯುಧ ಪೂಜೆ; Video

ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು.

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ.

ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ ರಾಜಮನೆತನದ ಆನೆ, ಹಸು ಮತ್ತು ಕುದುರೆಗಳು ಭಾಗವಹಿಸಿವೆ.

ಅರಮನೆಯಲ್ಲಿ ಆಯುಧಪೂಜೆ

ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ರಾಜವಂಶಸ್ಥ ಯದುವೀರರಿಂದ ಪೂಜೆ, ಪೂರ್ಣಾಹುತಿ ಕಾರ್ಯ ನಡೆದಿದೆ. ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಯುಧಗಳನ್ನು ಪಲ್ಲಕ್ಕಿಯಲ್ಲಿ ರವಾನಿಸಲಾಗಿದೆ. ಶುಚಿಗೊಳಿಸಿದ ಬಳಿಕ ಆಯುಧಗಳನ್ನ ಪಲ್ಲಕಿಯಲ್ಲಿ ವಾಪಸ್ ಅರಮನೆಗೆ ರವಾನೆ ಮಾಡಲಾಗಿದೆ. ಅರಮನೆಯ ಆನೆ ಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಕಾರ್ಯ ನಡೆದಿದೆ.

ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಯದುವೀರರು ಪೂಜೆ ಸಲ್ಲಿಸಿದರು. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದ್ದಾರೆ.

ಯದುವೀರರಿಂದ ಪೂಜಾ ಕೈಕಾರ್ಯ

ಯದುವೀರರಿಂದ ಪೂಜಾ ಕೈಕಾರ್ಯ ನಡೆದಿದೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೂ ಪೂಜೆ ಸಲ್ಲಿಸಿದ ಬಳಿಕ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ನೆರವೇರಿದೆ.

ಸೋಮೇಶ್ವರ ದೇಗುಲಕ್ಕೆ ಪಟ್ಟದ ಕತ್ತಿಯ ಜೊತೆಗೆ ಪಲ್ಲಕ್ಕಿ ಹೊರಟಿತು. ಪಟ್ಟದ ಆನೆಗಳು. ಪಟ್ಟದ ಕುದುರೆಗಳ ಜೊತೆಗೆ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT