ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ 
ರಾಜ್ಯ

ಪೇಸ್ ಮೇಕರ್ ಅಳವಡಿಕೆ ಯಶಸ್ವಿಯಾಗಿದೆ, ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಉತ್ತಮವಾಗಿದೆ: ಪ್ರಿಯಾಂಕ್ ಖರ್ಗೆ

ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಖರ್ಗೆಯವರ ಆರೋಗ್ಯ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ. ಅಕ್ಟೋಬರ್ 3 ರಿಂದ ತಮ್ಮ ಕೆಲಸವನ್ನು ಪುನರಾರಂಭಿಸುವ ನಿರೀಕ್ಷೆಯಿದೆಯ ಅವರ ಎಲ್ಲಾ ನಿಗದಿತ ಕಾರ್ಯಯೋಜನೆಗಳಿಗೆ ಹಾಜರಾಗುತ್ತಾರೆ. ಎಲ್ಲರೂ ನೀಡಿದ ಕಾಳಜಿ, ಬೆಂಬಲ ಮತ್ತು ಪ್ರೀತಿಗೆ ನಮ್ಮ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಈ ನಡುವೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಪತ್ರೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರ ಆರೋಗ್ಯ ಉತ್ತಮವಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಣೆಯಾಗಿದೆ. ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ, ಅವರ ಆರೋಗ್ಯವೀಗ ಉತ್ತಮವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

Asia Cup 2025 ಟ್ರೋಫಿ ವಿವಾದ: ಟೀಂ ಇಂಡಿಯಾ ನಡೆ ವಿರುದ್ಧ RCB ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕಿಡಿ!

SCROLL FOR NEXT