ಕೋಡಿಮಠದ ಸ್ವಾಮೀಜಿ  
ರಾಜ್ಯ

ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರಾ?: ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನು ಕಾಂಗ್ರೆಸ್ ನಾಯಕರೇ ಆಡುತ್ತಿದ್ದಾರೆ.

ಧಾರವಾಡ: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನು ಕಾಂಗ್ರೆಸ್ ನಾಯಕರೇ ಆಡುತ್ತಿದ್ದಾರೆ.

ಈ ಮಧ್ಯೆ ರಾಜ್ಯ, ದೇಶದ ಭವಿಷ್ಯ, ರಾಜಕಾರಣಿಗಳ ವಿಚಾರ, ಪ್ರಾಕೃತಿಕ ವಿಕೋಪಗಳ ಬಗ್ಗೆ ಭವಿಷ್ಯ ಹೇಳುವ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ (Dharwad) ಮಾತನಾಡುತ್ತಾ ನುಡಿದಿದ್ದಾರೆ.

ಸಂಕ್ರಾಂತಿ‌ವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ. ಉಳಿದದ್ದು ಸಂಕ್ರಾಂತಿ ಆದ ಮೇಲೆ ನೋಡಿ ಹೇಳಬೇಕು ಎಂದಿದ್ದಾರೆ. ಬಯಲು ಸೀಮೆಯಲ್ಲಿ ಮಲೆನಾಡು ಮಳೆ ಎಂದು ಈ ಹಿಂದೆ ಹೇಳಿದ್ದೆ. ಮಲೆನಾಡು ಬಯಲುಸೀಮೆ ಆಗಿದೆ, ಬಯಲುಸೀಮೆ ಮಲೆನಾಡು ಆಗಿದೆ ಎಂದು ಹೇಳಿದ್ದಾರೆ.

ದೇಶದಾದ್ಯಂತ ಹಬ್ಬಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜನ ಹಿತಕ್ಕಾಗಿ ನಡೆಯುತ್ತಿವೆ. ದಸರಾದ ನಿಜವಾದ ಅರ್ಥವೆಂದರೆ ದುಷ್ಟ ಶಕ್ತಿಗಳನ್ನು ದೂರವಿಡುವುದಾಗಿದೆ. ಮನುಷ್ಯ ತನ್ನಲ್ಲಿನ ಕೋಪ, ತಾಪ, ಆಸೆಗಳನ್ನು ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿ ಬೇಕು. ಈ ದೃಷ್ಟಿಯಿಂದ ದಸರಾವನ್ನು ಆಚರಿಸಲಾಗುತ್ತದೆ. ಇದು ನಮ್ಮ ಪರಂಪರೆಯ ದೊಡ್ಡ ಸಂಕೇತವಾಗಿ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT