ಧರ್ಮಸ್ಥಳ: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಎಸ್ ಐಟಿ ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ ತನಿಖೆಯನ್ನು ಮುಂದುವರಿಸಿದೆ.