ದಿನೇಶ್ ಗುಂಡೂರಾವ್ online desk
ರಾಜ್ಯ

ಕೇರಳ ರಾಜ್ಯ ಆರೋಗ್ಯ ರಕ್ಷಣಾ ವ್ಯವಸ್ಥೆ ಕೊಂಡಾಡಿದ ಸಚಿವ ದಿನೇಶ್ ಗುಂಡೂರಾವ್

ನನ್ನ ಇಲಾಖೆಯ ವಿಷಯಕ್ಕೆ ಬಂದಾಗ, ನಾನು ಯಾವಾಗಲೂ ಕರ್ನಾಟಕವನ್ನು ಭಾರತದೊಂದಿಗೆ ಅಲ್ಲದೆ, ಕೇರಳ ಮತ್ತು ತಮಿಳುನಾಡಿನೊಂದಿಗೆ ಹೋಲಿಸುತ್ತೇನೆ. ಈ ರಾಜ್ಯಗಳು ಗುಣಮಟ್ಟದ ಆರೋಗ್ಯ ರಕ್ಷಣೆ ನೀಡುವ ವಿಷಯದಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿವೆ.

ಕಾಸರಗೋಡು/ಕೇರಳ: ಆರೋಗ್ಯ ರಕ್ಷಣೆ ವಿಷಯದಲ್ಲಿ ಕೇರಳ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.

ಭಾರತದ ಪ್ರಮುಖ ಆರೋಗ್ಯ ಸೇವೆಒದಗಿಸುವ ಆಸ್ಟರ್ ಡಿಎಂ ಹೆಲ್ತ್‌ಕೇರ್ ಸಂಸ್ಥೆ ಕೇರಳದಲ್ಲಿ ತನ್ನ ಎಂಟನೇ ಆಸ್ಪತ್ರೆಯಾಗಿ ಅತ್ಯಾಧುನಿಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ 'ಆಸ್ಟರ್ ಮಿಮ್ಸ್ ಕಾಸರಗೋಡು' ಅನ್ನು ಗುರುವಾರ ಪ್ರಾರಂಭಿಸಿತು.

ಆಸ್ಪತ್ರೆ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ವೇದಿಕೆ ಹಂಚಿಕೊಂಡ ದಿನೇಶ್ ಗುಂಡೂರಾವ್ ಅವರು, ಕೇರಳದ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಶ್ಲಾಘಿಸಿದರು. ಆರೋಗ್ಯ ರಕ್ಷಣೆ ವಿಷಯದಲ್ಲಿ ಕೇರಳ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಉತ್ತಮ ಆರೋಗ್ಯ ವ್ಯವಸ್ಥೆಯಿಂದಾಗಿ ಸರಾಸರಿ ಜೀವಿತಾವಧಿ ಈಗ ಸುಮಾರು 70 ವರ್ಷಗಳಿಗೆ ಏರಿದೆ. ದಕ್ಷಿಣ ರಾಜ್ಯಗಳು ಎಲ್ಲಾ ಮಾನವ ಸೂಚ್ಯಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆಯ ಆರೋಗ್ಯ ರಕ್ಷಣೆಯ ವಿಷಯದಲ್ಲಿ ಕೇರಳ ನಮ್ಮ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ ಎಂದು ತಿಳಿಸಿದರು.

ನನ್ನ ಇಲಾಖೆಯ ವಿಷಯಕ್ಕೆ ಬಂದಾಗ, ನಾನು ಯಾವಾಗಲೂ ಕರ್ನಾಟಕವನ್ನು ಭಾರತದೊಂದಿಗೆ ಅಲ್ಲದೆ, ಕೇರಳ ಮತ್ತು ತಮಿಳುನಾಡಿನೊಂದಿಗೆ ಹೋಲಿಸುತ್ತೇನೆ. ಈ ರಾಜ್ಯಗಳು ಗುಣಮಟ್ಟದ ಆರೋಗ್ಯ ರಕ್ಷಣೆ ನೀಡುವ ವಿಷಯದಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಿವೆ. ಆದ್ದರಿಂದ, ಆರೋಗ್ಯ ಸೌಲಭ್ಯಗಳ ವಿಷಯದಲ್ಲಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳೊಂದಿಗೆ ಸ್ಪರ್ಧಿಸುವಂತೆ ನಾನು ಯಾವಾಗಲೂ ನನ್ನ ಜನರಿಗೆ ಹೇಳುತ್ತೇನೆ. ಇದು ನಮ್ಮ ಮಾನದಂಡದಂತಿದೆ ಎಂದ ಶ್ಲಾಘಿಸಿದರು. ಇದೇ ವೇಳೆ ಚೆರ್ಕಳದಲ್ಲಿರುವ ಹೊಸ ಆಸ್ಪತ್ರೆ ಕಾಸರಗೋಡಿನ ಜನರಿಗೆ ಉಪಯುಕ್ತವಾಗಲಿದೆ ಎಂದೂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆ ಮಾತು!

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karur stampede: ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

SCROLL FOR NEXT