ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ 
ರಾಜ್ಯ

'ವಾಟಾಳ್ ಪಕ್ಷ' ಸೇರಿದಂತೆ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ: ಯಾಕೆ ಗೊತ್ತಾ?

ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅ. 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು.

ಬೆಂಗಳೂರು: ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿರುವ ರಾಜಕೀಯ ಪಕ್ಷಗಳು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಆಯೋಗವು ಶೋಕಾಸ್ ನೋಟಿಸ್ ಜಾರಿಗೊಳಿಸಿದೆ ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಗದೀಶ.ಜಿ ಅವರು ತಿಳಿಸಿದ್ದಾರೆ.

ಭಾರತೀಯ ಡಾ. ಬಿ.ಆರ್. ಅಂಬೇಡ್ಕರ್ ಜನತಾ ಪಕ್ಷ, ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ, ಕನ್ನಡ ಚಳವಳಿ ವಾಟಾಳ್ ಪಕ್ಷ, ಕನ್ನಡ ಪಕ್ಷ, ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಕಾರ್ಮಿಕರ ಪಕ್ಷ ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು, ಆಯೋಗದ ದಾಖಲೆಗಳ ಪ್ರಕಾರ ಈ ಪಕ್ಷಗಳು ಮೂರು ವರ್ಷಗಳಿಂದ (2021-22, 2022-23 ಹಾಗೂ 2023-24) ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.

ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ ಎಂದು ತಿಳಿಸಿದ್ದಾರೆ.

ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅ. 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಬೇಕು.

ಒಂದು ವೇಳೆ ನಿಗದಿತ ದಿನಾಂಕದಂದು ಹಾಜರಾಗಿ ಉತ್ತರ ನೀಡದಿದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಜಗದೀಶ.ಜಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT