ಅಜ್ಜಿ-ಮೊಮ್ಮಗಳು  
ರಾಜ್ಯ

ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ 'ಗೃಹಲಕ್ಷ್ಮಿ' ಹಣ ಸಂಗ್ರಹಿಸಿಟ್ಟ ಅಜ್ಜಿ!

ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ಕೊಪ್ಪಳ: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಸಂಗ್ರಹಿಸಿಟ್ಟು ಅನೇಕ ಮಹಿಳೆಯರು ಅದನ್ನು ಸದುಪಯೋಗ ಮಾಡಿಕೊಂಡ ಉದಾಹರಣೆಗಳಿವೆ. ಇತ್ತೀಚೆಗೆ ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ವಾಷಿಂಗ್‌ ಮೆಷಿನ್ ಖರೀದಿಸಿದ್ದು ಸುದ್ದಿಯಾಗಿತ್ತು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಶಂಕ್ರಮ್ಮ ಎಂಬವರು ತಮ್ಮ ತಬ್ಬಲಿ ಮೊಮ್ಮಗಳು ರೇಖಾಳ ಉಜ್ವಲ ಭವಿಷ್ಯಕ್ಕೆ, ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ಅಜ್ಜಿ ಶಂಕ್ರಮ್ಮ ಗೃಹಲಕ್ಷ್ಮೀಯಿಂದ ಬಂದ ಸಂಪೂರ್ಣ ಹಣವನ್ನು ಮೊಮ್ಮಗಳು ರೇಖಾಳ ಹೆಸರಿನ ಖಾತೆಗೆ ಜಮಾ ಮಾಡಿದ್ದಾರೆ. ತಂದೆ ತಾಯಿ ಇಲ್ಲದೆ ಬೆಳೆದ ರೇಖಾಳ ಭವಿಷ್ಯ ಮತ್ತು ವಿದ್ಯಾಭ್ಯಾಸವನ್ನು ಸುರಕ್ಷಿತಗೊಳಿಸಲು ಈ ಹಣವನ್ನು ಎತ್ತಿಟ್ಟಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

SCROLL FOR NEXT