ಗಣತಿದಾರರ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಗಣತಿದಾರರ ಪ್ರತಿಭಟನೆ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಅಡ್ಡಿ!

ಸೆಪ್ಟೆಂಬರ್ 22 ರಂದು ಕರ್ನಾಟಕದಾದ್ಯಂತ ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರವರೆಗೆ ಮುಂದುವರಿಯುತ್ತದೆ.

ಬೆಂಗಳೂರು: ಜಾತಿ ಸಮೀಕ್ಷೆ ಎನ್ನಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೆಂಗಳೂರಿನಲ್ಲಿ ಮೊದಲ ದಿನವಾದ ಶನಿವಾರ ಅಡೆತಡೆಗಳು ಎದುರಾಗಿದ್ದು, ತಮ್ಮ ಕುಂದುಕೊರತೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಗಣತಿದಾರರು ಪ್ರತಿಭಟನೆ ನಡೆಸಿದರು.

ಸುಮಾರು 100 ಗಣತಿದಾರರು ಮಲ್ಲೇಶ್ವರಂ ನಗರಸಭೆ ಕಚೇರಿ ಎದುರು ಧರಣಿ ನಡೆಸಿದರು. ಸೆಪ್ಟೆಂಬರ್ 22 ರಂದು ಕರ್ನಾಟಕದಾದ್ಯಂತ ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರವರೆಗೆ ಮುಂದುವರಿಯುತ್ತದೆ. ಬೆಂಗಳೂರಿನಲ್ಲಿ ಇದನ್ನು ಎರಡು ದಿನಗಳ ಕಾಲ ಹೆಚ್ಚಿಗೆ ನಡೆಸಲು ನಿರ್ಧರಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA)ಮೂಲಗಳ ಪ್ರಕಾರ, ಪ್ರತಿಭಟನಾ ನಿರತ ಗಣತಿದಾರರು ಅನಾರೋಗ್ಯದ ಕುಟುಂಬ ಸದಸ್ಯರನ್ನು ನೋಡಿಕೊಳ್ಳುವುದು ಮತ್ತು ಆರೋಗ್ಯದ ತೊಂದರೆಗಳು ಸೇರಿದಂತೆ ವೈಯಕ್ತಿಕ ಸವಾಲುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಮಹಿಳೆಯೊಬ್ಬರು ತನ್ನ ವಿಶೇಷ ಮಗುವನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದು ಏಕೆ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ತೋರಿಸಿದ್ದಾರೆ. ನಂತರ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾಕಾರರನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಸರ್ಕಾರಿ ಶಿಕ್ಷಕರಾಗಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರಕಾರ ಅಂದಾಜು ರೂ. 420 ಕೋಟಿ ವೆಚ್ಚದಲ್ಲಿ ಸಮೀಕ್ಷೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ