ಸಾಂದರ್ಭಿಕ ಚಿತ್ರ 
ರಾಜ್ಯ

ಮಹಾರಾಷ್ಟ್ರ: ಬೆಳಗಾವಿಯ ಒಂದೇ ಕುಟುಂಬದ ಮೂವರು ಸಮುದ್ರಪಾಲು; ನಾಲ್ವರು ನಾಪತ್ತೆ

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವೊಂದು ದಸರಾ ರಜೆಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣಿಸಿತ್ತು. ಈ ವೇಳೆ ಎಂಟು ಮಂದಿಯೂ ಈಜಲು ಸಮುದ್ರಕ್ಕೆ ಇಳಿದಿದ್ದರು.

ಬೆಳಗಾವಿ: ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ ಬೀಚ್ ಬಳಿ ಬೆಳಗಾವಿಯ ಒಂದೇ ಕುಟುಂಬದ ಮೂವರು ಅರೇಬಿಯನ್ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇತರ ನಾಲ್ವರು ಕಣ್ಮರೆಯಾಗಿದ್ದಾರೆ.

ಮೂಲಗಳ ಪ್ರಕಾರ 16 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆ ಸುರಕ್ಷಿತವಾಗಿದ್ದಾಳೆ.

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವೊಂದು ದಸರಾ ರಜೆಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣಿಸಿತ್ತು. ಈ ವೇಳೆ ಎಂಟು ಮಂದಿಯೂ ಈಜಲು ಸಮುದ್ರಕ್ಕೆ ಇಳಿದಿದ್ದರು. ಆದರೆ ಸಮುದ್ರದ ಆಳಕ್ಕೆ ಹೋಗಿದ್ದರಿಂದ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದರು.

ತಕ್ಷಣ ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು. ಸಂಜೆ ತಡವಾಗಿ, ಮೂವರ ಮೃತದೇಹಗಳನ್ನು ಹೊರತೆಗೆಯಲಾಯಿತು.

ಮೃತರನ್ನು ಇರ್ಫಾನ್ ಕಿತ್ತೂರ್(34), ಇಬಾದ್ ಕಿತ್ತೂರ್ (13) ಮತ್ತು ನಮೀರಾ ಅಕ್ತರ್(16) ಎಂದು ಗುರುತಿಸಲಾಗಿದೆ.

ಕಾಣೆಯಾದ ಉಳಿದ ನಾಲ್ವರು ಕುಟುಂಬ ಸದಸ್ಯರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ.

ಕರಾವಳಿ ಪೊಲೀಸರು ಮತ್ತು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT