ಮೃತಪಟ್ಟ ಸೋದರರು  
ರಾಜ್ಯ

ಗೋಕಾಕ್: ತಮ್ಮನ ಸಾವಿನ ಸುದ್ದಿ ಕೇಳಿ ಹೃದಯಾಘಾತವಾಗಿ ಅಣ್ಣನೂ ಸಾವು, ಹೆತ್ತವರ ಆಕ್ರಂದನ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ದುರಂತ ನಡೆದಿದ್ದು, ಸತೀಶ್ ಬಾಗನ್ನವರ್​ (16ವ) ಅನಾರೋಗ್ಯದ ಕಾರಣದಿಂದ ಮೃತನಾದರೆ, ಸುದ್ದಿ ತಿಳಿದ ಅಣ್ಣ ಬಸವರಾಜ್ ಬಾಗನ್ನವರ್​​ (24ವ) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಅನಾರೋಗ್ಯದಿಂದ ಮೃತಪಟ್ಟ ವಿಷಯ ತಿಳಿದು ಅಣ್ಣ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ದುರಂತ ನಡೆದಿದ್ದು, ಸತೀಶ್ ಬಾಗನ್ನವರ್​ (16ವ) ಅನಾರೋಗ್ಯದ ಕಾರಣದಿಂದ ಮೃತನಾದರೆ, ಸುದ್ದಿ ತಿಳಿದ ಅಣ್ಣ ಬಸವರಾಜ್ ಬಾಗನ್ನವರ್​​ (24ವ) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಘಾತ ಹೇಳತೀರದಾಗಿದೆ.

ನಡೆದ ಘಟನೆಯೇನು?

ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16ವ) ನಿನ್ನೆ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (24ವ) ಕುಸಿದು ಬಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ ಬಾಗನ್ನವರ ಸಾವಿನ ಸುದ್ದಿ ಬಂತು. ಸುದ್ದಿ ಕೇಳಿದ ತಕ್ಷಣ ಬಸವರಾಜ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಬಸವರಾಜ್ ಪತ್ನಿ ಆರೋಗ್ಯದಲ್ಲೂ ಏರುಪೇರು!

ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿ ಸಹ ಕುಸಿದು ಬಿದ್ದಿದ್ದಾರೆ. ಎನ್ನಲಾಗಿದೆ. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೊಳಗಾಗಿದ್ದಾರೆ. ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮುಂದಿನ ವರ್ಷ 17ನೇ ಬಜೆಟ್ ಮಂಡಿಸುತ್ತೇನೆ': ನಾಯಕತ್ವ ಬದಲಾವಣೆಯ ವದಂತಿಗೆ ತೆರೆ ಎಳೆದರೇ ಸಿದ್ದರಾಮಯ್ಯ?

ಮೇಕೆದಾಟು ಯೋಜನೆ: ಪ್ರಸಕ್ತ ದರಕ್ಕೆ ಪರಿಷ್ಕರಿಸಿ DPR ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ದೇಶಕ್ಕೆ ಹೆಮ್ಮೆ ತಂದ ತಿಪಟೂರು IAS ಅಧಿಕಾರಿ ಯಶೋಗಾಥೆ: ಮಧ್ಯಪ್ರದೇಶದಲ್ಲಿ 'ಮಣ್ಣಿನ ಮಗ'ನ ಜಲಕ್ರಾಂತಿ!

ವಿಧಾನಸೌಧದ ಮುಂದೆ ಮಾರಾಮಾರಿ ನಡೆಸಿದ್ದು ನೇಪಾಳಿಗರು: ಕೇಸ್ ದಾಖಲು

ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ: ರಾಜ್ಯ ಸರ್ಕಾರ

SCROLL FOR NEXT