ಸಾಂದರ್ಭಿಕ ಚಿತ್ರ 
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗೆ ವಿಷಪ್ರಾಶನ: ಓರ್ವ ಆರೋಪಿ ಬಂಧನ

12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳನ್ನು ಬೇಟಿಯಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.

ಮೈಸೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಹುಲಿಗೆ ವಿಷಪ್ರಾಶನ ಮಾಡಿಸಿದ ಆರೋಪದ ಮೇಲೆ ಅರಣ್ಯ ಇಲಾಖೆ ಓರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದೆ,

ಪ್ರಕರಣ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸ್ಮಿತ್ ಬಿಜೂರ್ ನೇತೃತ್ವದ ತಂಡ ಶನಿವಾರ ಹನೂರಿನಲ್ಲಿ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯನ್ನು ಚುರುಕುಗೊಳಿಸಿದೆ.

12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳನ್ನು ಬೇಟಿಯಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.

ಆರೋಪಿಗಳು ಹುಲಿಯ ಮೃತದೇಹವನ್ನು ಹೂಳಲು ಕಂದಕಕ್ಕೆ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ. ಆದರೆ,250 ಕೆಜಿ ತೂಕದ ದೇಹವನ್ನು ಸ್ಥಳಾಂತರಿಸಲು ಸಾಧ್ಯವಾಗದೆ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿ, ವಿವಿಧೆಡೆ ಹೂತಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ತನಿಖೆ ಆರಂಭಿಸಿದ್ದು, ಈ ನಡುವೆ ವಾಹನೆ ಹಿಡಿದು ಸ್ನಿಫರ್ ಡಾಗ್ಸ್ ಗಳು ಪಚ್ಚೇದೊಡ್ಡಿ ಗ್ರಾಮದ ಮನೆಯೊಂದಕ್ಕೆ ತೆರಳಿವೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಮೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಇಂತಹ ಘಟನೆಗಳನ್ನು ತಡೆಗಟ್ಟಲು ಕ್ರಮಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಎಂ ಎಂ ಬೆಟ್ಟಗಳನ್ನು ಹುಲಿ ಮೀಸಲು ಪ್ರದೇಶವೆಂದು ಘೋಷಿಸುವ ಬಗ್ಗೆ ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ಆರಂಭಿಸಲು, ಅರಣ್ಯ-ಅಂಚಿನ ಹಳ್ಳಿಗಳಲ್ಲಿನ ಜಾನುವಾರುಗಳ ಮಾಹಿತಿ ಸಂಗ್ರಹಿಸಲು ಮತ್ತು ಕಾಡು ಪ್ರಾಣಿಗಳಿಂದ ಜಾನುವಾರುಗಳು ಸಾವನ್ನಪ್ಪಿದ ರೈತರಿಗೆ ಸಕಾಲಿಕ ಪರಿಹಾರವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲಿಕ ವೇತನ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT