ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ 
ರಾಜ್ಯ

EV Vehicles: 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಚಾಲನೆ; ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ- ಈಶ್ವರ್ ಖಂಡ್ರೆ

ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ವಿಧಾನಸೌಧದ ಮೆಟ್ಟಿಲುಗಳ ಬಳಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ‌ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ವಿದ್ಯುತ್ ಚಾಲಿತ (ಇವಿ) ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಈಶ್ವರ್ ಖಂಡ್ರೆ, ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದರು.

15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!