ಬೀದಿನಾಯಿಗಳ ದಾಳಿ 
ರಾಜ್ಯ

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ: ಗಾಯಾಳು ಭೇಟಿಯಾದ ಜಿಲ್ಲಾಧಿಕಾರಿ; ಕ್ರಮ ಕೈಗೊಳ್ಳದ ಅಧಿಕಾರಿಗಳ ತರಾಟೆಗೆ

ಬೇಲೂರಿನಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾತಿ ಸಮೀಕ್ಷೆ ನಡೆಸುತ್ತಿದ್ದ ಚಿಕ್ಕಮ್ಮ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಜೊತೆಗೆ ರಕ್ಷಣೆಗೆ ಬಂದಿದ್ದ ಇತರರನ್ನು ಕಚ್ಚಿದ್ದವು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ.

ಹಾಸನ: ಇತ್ತೀಚೆಗೆ ಬೇಲೂರು ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೊಳಗಾಗಿ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (HIMS) ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕಿ ಚಿಕ್ಕಮ್ಮ ಅವರನ್ನು ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಭಾನುವಾರ ಭೇಟಿ ಮಾಡಿದರು.

ಬೇಲೂರಿನಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾತಿ ಸಮೀಕ್ಷೆ ನಡೆಸುತ್ತಿದ್ದ ಚಿಕ್ಕಮ್ಮ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಜೊತೆಗೆ ರಕ್ಷಣೆಗೆ ಬಂದಿದ್ದ ಇತರರನ್ನು ಕಚ್ಚಿದ್ದವು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ.

ಭೇಟಿ ವೇಳೆ ಗಾಯಾಳುಗಳ ಆರೋಗ್ಯ ಕುರಿತು ಮಾಹಿತಿ ಪಡೆದ ಅವರು, ಗಾಯಗೊಂಡ ಶಿಕ್ಷಕರಿಗೆ ಸರಿಯಾದ ಚಿಕಿತ್ಸೆ ಮತ್ತು ಸಕಾಲಿಕ ಊಟವನ್ನು ಖಚಿತಪಡಿಸಿಕೊಳ್ಳುವಂತೆ ಹಿಮ್ಸ್ ನಿರ್ದೇಶಕ ಡಾ. ರಾಜಣ್ಣ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾಗಪ್ಪ ಅವರಿಗೆ ಸೂಚಿಸಿದರು.

ಇದೇ ವೇಳೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ವಿಫಲವಾದ ಬೇಲೂರು ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿ ಬಸವರಾಜ ಶಿಗ್ಗಾವಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಪರಿಸ್ಥಿತಿ ನಿರ್ವಹಿಸಲು ಮತ್ತು ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಬೇಲೂರು ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ