ಸಂಗ್ರಹ ಚಿತ್ರ 
ರಾಜ್ಯ

ಮುಡಾ ಹಗರಣ: ಹೊಸದಾಗಿ 40 ಕೋಟಿ ರೂ ಮೌಲ್ಯದ ಆಸ್ತಿ ED ಮುಟ್ಟುಗೋಲು!

ಮುಡಾ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ 40 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ 40 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ. ಕೆಲವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ಗಳನ್ನು ಒಳಗೊಂಡಂತೆ 34 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಕ್ಟೋಬರ್ 4ರಂದು ತಾತ್ಕಾಲಿಕ ಆದೇಶ ಹೊರಡಿಸಲಾಗಿತ್ತು ಎಂದು ಇಡಿ ಹೇಳಿದೆ.

ಈ ಆಸ್ತಿಗಳ ಮಾರುಕಟ್ಟೆ ಮೌಲ್ಯ 40.08 ಕೋಟಿ ರೂ. ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸರ ಎಫ್‌ಐಆರ್‌ ನಂತರ ಅಖಾಡಕ್ಕೆ ಇಳಿದ ಜಾರಿ ನಿರ್ದೇಶನಾಲಯ ಹಣ ವರ್ಗಾವಣೆ ಕುರಿತಂತೆ ತನಿಖೆ ಶುರು ಮಾಡಿತ್ತು. ಜಾರಿ ನಿರ್ದೇಶನಾಲಯ ಈ ಹಿಂದೆಯೂ ಇದೇ ರೀತಿಯ ಆಸ್ತಿಗಳ ಮುಟ್ಟುಗೋಲು ಆದೇಶಗಳನ್ನು ಹೊರಡಿಸಿತ್ತು. ಈ ತನಿಖೆಯ ಭಾಗವಾಗಿ ಇದುವರೆಗೆ 400 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಮಾಜಿ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ನನ್ನು ಇಡಿ ಬಂಧಿಸಿದ್ದು ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿದ್ದಾರೆ. ದಿನೇಶ್ ಕುಮಾರ್ ಬಳಿಯ 40.8 ಕೋಟಿ ರೂ. ಮೌಲ್ಯದ 32 ಸೈಟ್​​ಗಳನ್ನು ಇದೀಗ​ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಆ ಮೂಲಕ ಸೈಟ್​​ಗಳನ್ನು ಮರುಹಂಚಿಕೆ ಮಾಡಿ ದಿನೇಶ್ ಲಾಭ ಮಾಡಿಕೊಂಡಿದ್ದರು. ಇದಕ್ಕೆ ಸಾಕ್ಷ್ಯ ಎಂಬಂತೆ ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶೂ ಎಸೆತ': CJI ಬಿಆರ್ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಹೇಳಿದ್ದೇನು?

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟ!

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್‌ ಧೂಳಿಪಟ!

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು-ಶೀತಕ್ಕೆ ಸಿರಪ್‌ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

SCROLL FOR NEXT