ಸಮೀಕ್ಷೆ ನಡೆಸುತ್ತಿರುವುದು. 
ರಾಜ್ಯ

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

ಶಾಲಾ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ("ಜಾತಿ ಗಣತಿ" ಎಂದೇ ವ್ಯಾಪಕವಾಗಿ ಕರೆಯಲಾಗುತ್ತಿದೆ)ಯ ಅವಧಿಯನ್ನು ವಿಸ್ತರಣೆ ಮಾಡಿದೆ.

ಶಾಲಾ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಕಳೆದ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭವಾಗಿದ್ದು,. ಈ ಗಣತಿಗೆ ರಾಜ್ಯ ಸರ್ಕಾರ ಅಕ್ಟೋಬರ್ 7ರಂದು ಡೆಡ್​ಲೈನ್ ನೀಡಿತ್ತು. ಆದರೆ ಸರ್ಕಾರಕ್ಕೆ ಕೊಟ್ಟ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಸಮೀಕ್ಷೆಯ ಅವಧಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್​ 24ರವರೆಗೆ ವಿಸ್ತರಿಸಲಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿಅಕ್ಟೋಬರ್ 12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 24ರ ವರೆಗೆ ಶಾಲಾ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗಿ ಆಗಬೇಕು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಳ್ಳುವಂತೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ