ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಂದಿನಿ ಪಾರ್ಲರ್‌ಗೆ ನುಗ್ಗಿದ BMTC ಬಸ್, ತಪ್ಪಿದ ಭಾರೀ ಅನಾಹುತ

ಇದರಿಂದಾಗಿ ಬಸ್‌‍ನಲ್ಲಿದ್ದ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದವರು ಆತಂಕಗೊಂಡರು. ಅದೃಷ್ಟವಶಾತ್‌ ಯಾವುದೇ ಸಾವುನೋವುಗಳಾಗಿಲ್ಲ. ಬಸ್‌‍ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬೆಂಗಳೂರು: ಬಿಎಂಟಿಸಿ ಬಸ್‌ವೊಂದು ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.

ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ 96G ಸಂಖ್ಯೆಯ ಬಿಎಂಟಿಸಿ ಬಸ್‌ ಬೆಳಿಗ್ಗೆ 9:30ಕ್ಕೆ ಈ ಮಾರ್ಗದಲ್ಲಿ ಹೊರಟಿತ್ತು. ಈ ವೇಳೆ ಚಾಲಕ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡಿದ್ದು, ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಬಳಿಕ ಬಸ್ ನಿಲ್ದಾಣದ ಬಳಿಯಿದ್ದ ನಂದಿನಿ ಪಾರ್ಲರ್‌ ಐಸ್‌‍ಕ್ರೀಮ್‌ ಅಂಗಡಿಗೆ ನುಗ್ಗಿದೆ.

ಇದರಿಂದಾಗಿ ಬಸ್‌‍ನಲ್ಲಿದ್ದ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದವರು ಆತಂಕಗೊಂಡರು. ಅದೃಷ್ಟವಶಾತ್‌ ಯಾವುದೇ ಸಾವುನೋವುಗಳಾಗಿಲ್ಲ. ಬಸ್‌‍ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ಬಗ್ಗೆ ವಿಜಯನಗರ ಸಂಚಾರಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದು ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ತನಿಖೆ ಆರಂಭಿಸಿದ್ದಾರೆ.

ಚಾಲಕನ ಹಠಾತ್ ಅನಾರೋಗ್ಯವು ಬಸ್ ನಿಯಂತ್ರಣ ಕಳೆದುಕೊಳ್ಳಲು ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ: ಅಧಿಕಾರಿಗಳ ದುಂಬಾಲು ಬಿದ್ದ ಪತಿ!

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

'ಮುಸ್ಲಿಂ' ಮಹಿಳೆಗೆ ಚಿಕಿತ್ಸೆ ನೀಡಲ್ಲ: ಯೋಗಿ ನಾಡಲ್ಲಿ ಹೊಸ ವಿವಾದ ಹುಟ್ಟುಹಾಕಿದ ಡಾಕ್ಟರ್! ಮುಂದಿನ ಸಮಾಜದ ಗತಿ ಏನು?

SCROLL FOR NEXT