ರಾಜ್ಯ

ಮಳೆ ಎಫೆಕ್ಟ್: ಉಳ್ಳಾಲದಲ್ಲಿ ಅಪಾರ್ಟ್'ಮೆಂಟ್ ತಡೆಗೋಡೆ ಕುಸಿತ, ಕೆಲಕಾಲ ಆತಂಕ ಸೃಷ್ಟಿ

ತಡೆಗೋಡೆ ಕುಸಿದ ಪರಿಣಾಮ ಮಕ್ಕಳು ಆಟವಾಡುತ್ತಿದ್ದ ಪ್ರದೇಶದ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಬೆಂಗಳೂರು: ಸೋಮವಾರ ಮುಂಜಾನೆ ಸುರಿದ ಭಾರೀ ಮಳೆಯ ಪರಿಣಾಮ ಉಳ್ಳಾಲದಲ್ಲಿ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ಬಿದ್ದಿದ್ದು, ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತಡೆಗೋಡೆ ಕುಸಿದ ಪರಿಣಾಮ ಮಕ್ಕಳು ಆಟವಾಡುತ್ತಿದ್ದ ಪ್ರದೇಶದ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಘಟನೆ ಬಳಿಕ ಅಪಾರ್ಟ್ಮೆಂಟ್ ಸಂಕೀರ್ಣಕ್ಕೆ ನೀರು ನುಗ್ಗಿದ್ದು, ಕಾರೊಂದು ಹಾನಿಗೊಳಗಾಗಿದೆ.

ಭಾನುವಾರ ಬೆಳಿಗ್ಗೆ 8.30 ರಿಂದ ಸೋಮವಾರ ಬೆಳಿಗ್ಗೆ 8.30 ರವರೆಗೆ 24 ಗಂಟೆಗಳ ಕಾಲ 6.8 ಮಿಮೀ ಮಳೆಯಾಗಿದ್ದು, ಹೆಬ್ಬಾಳದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಳೆಯಿಂದಾಗಿ ನಾಗವಾರ ಜಂಕ್ಷನ್‌ನಲ್ಲಿಯೂ ಮರದ ಕೊಂಬೆ ರಸ್ತೆಗೆ ಬಿದ್ದಿದ್ದರಿಂದ ಸಂಚಾರ ಸ್ತಬ್ಧಗೊಂಡು, ವಾಹನ ಸವಾರರು ಪರದಾಡುವತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಸಂಚಾರ ಪೊಲೀಸರು ಬದಲಿ ಮಾರ್ಗಗಳ ಬಳಸುವಂತೆ ಮನವಿ ಮಾಡಿದರು.

ಪೀಣ್ಯದಲ್ಲಿ ಸುರಿದ ಮಳೆಗೆ ಮರವೊಂದು ಉರುಳಿ ಬಿದ್ದ ಕಾರಣ, ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸಂಚಾರ ಪೊಲೀಸರು ವಾಹನ ಸವಾರರು ಎನ್‌ಟಿಟಿಎಫ್ ರಸ್ತೆಯನ್ನು ಬಳಸುವಂತೆ ಸಲಹೆ ನೀಡಿದರು.

ಈ ನಡುವೆ ದುರ್ಬಲ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅರಣ್ಯ ವಿಭಾಗಕ್ಕೆ ನಿರ್ದೇಶನ ನೀಡುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Extends Dasara Holiday: ಸರ್ಕಾರಿ, ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅ.18ರವರೆಗೆ ರಜೆ ಘೋಷಿಸಿದ ಸಿಎಂ ಸಿದ್ದರಾಮಯ್ಯ!

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರ ಆದ್ರು 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರದ ಆದೇಶ!

Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ: ಅಧಿಕಾರಿಗಳ ದುಂಬಾಲು ಬಿದ್ದ ಪತಿ!

SCROLL FOR NEXT